Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಒತ್ತಾಯ 

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.21 : ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಮತ್ತು ಆದಿವಾಲ ಫಾರಂ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.

ಪಟ್ರೆಹಳ್ಳಿ ಹಾಗೂ ಆದಿವಾಲ ಫಾರಂ ಗ್ರಾಮಗಳಲ್ಲಿ ಎಂಟುನೂರು ಮನೆಗಳಿದ್ದು, ದಲಿತರೆ ಹೆಚ್ಚಾಗಿ ಕುಡಿತಕ್ಕೆ ಬಲಿಯಾಗುತ್ತಿದ್ದಾರೆ. ದಿನನಿತ್ಯವೂ ಕೂಲಿ ಮಾಡಿ ಬದುಕುವ ಇವರುಗಳು ದುಡಿಮೆಯನ್ನೆಲ್ಲಾ ಕುಡಿತಕ್ಕೆ ಹಾಕಿದರೆ ಕುಟುಂಬದ ಗತಿ ಏನು ಎಂದು ಮಹಿಳೆಯರು ರೋಧಿಸುವಂತಾಗಿದೆ. ಹದಿಮೂರು ಚಿಲ್ಲರೆ ಅಂಗಡಿಗಳಲ್ಲಿ ಮದ್ಯ ಎಗ್ಗಿಲ್ಲದೆ ಮಾರಾಟವಾಗುತ್ತಿದೆ. ಸಾಕಷ್ಟು ಬಾರಿ ಅಬಕಾರಿ ಇಲಾಖೆಗೆ ದೂರು ನೀಡಿದರೂ ಕ್ರಮಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಶಿವಕುಮಾರ್ ವಿ. ಗೌರವಾಧ್ಯಕ್ಷ ತಿಪ್ಪೇಸ್ವಾಮಿ, ಗಿರೀಶ್‍ಕುಮಾರ್ ವಿ. ರೇವಣಸಿದ್ದಪ್ಪ, ಮಹಮದ್‍ರಫಿ, ರಾಘವೇಂದ್ರ ಆರ್.
ರವಿಕುಮಾರ್ ಎಸ್. ತಿಪ್ಪೇಶ್, ವಿನೋದ್‍ಕುಮಾರ್, ಮಂಜುನಾಥ್ ಹೆಚ್. ಸಿದ್ದಪ್ಪ, ಹನುಮಂತು, ಶಿವರಾಜ್, ಮ.ಮೋಸಿನ್, ದಾದಾಪೀರ್, ವಿಜಯಕುಮಾರ್, ಸುರೇಶ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment