Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ವಿಚಾರದಲ್ಲಿ ಸಿಎಂ, ಡಿಸಿಎಂ ಜಟಾಪಟಿ : ಸಿದ್ದರಾಮಯ್ಯ ಹೇಳಿದ್ದೇನು..?

---Advertisement---

ಬೆಂಗಳೂರು: ಸದ್ಯ ರಾಜ್ಯದಲ್ಲಿ ಬಹುಮತ ಪಡೆದು ಕಾಂಗ್ರೆಸ್ ಸರ್ಕಾರ ಆಡಳಿತದ ಚುಕ್ಕಾಣಿ‌ ಹಿಡಿದಿದೆ. ಸಿದ್ದರಾಮಯ್ಯ ಸಂಪುಟವೂ ತುಂಬಿದೆ. ಆದರೆ ಈಗಲೂ ಅಸಮಾಧಾನಿತರು ಕಾಣಸಿಗುತ್ತಾರೆ. ಎಲ್ಲರಿಗೂ ಸಚಿವ ಸ್ಥಾನ ಕೊಡಲು ಕಷ್ಟ ಸಾಧ್ಯ ಎಂಬ ಕಾರಣಕ್ಕೇನೆ ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ನೀಡಲಾಗುತ್ತದೆ. ಇದೀಗ ಅದೇ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದೆ.

 

ಶಾಸಕರು ಮತ್ತು ಎಂಎಲ್ಸಿಗಳನ್ನು ಆಯ್ಕೆ ಮಾಡಲು ಸಿದ್ದರಾಮಯ್ಯ ಲೀಸ್ಟ್ ಹಿಡಿದು ಕುಳಿತುಕೊಂಡರೆ, ಕಾರ್ಯಕರ್ತರಿಗೆ ನೀಡಬೇಕೆಂದು ಡಿಕೆ ಶಿವಕುಮಾರ್ ಪಟ್ಟು ಹಿಡಿದು ಕೂತಿದ್ದಾರೆ. ಇಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಬೆಂಗಳೂರಿಗೆ ಭೇಟಿ ನೀಡಿದ್ದು, ಸಭೆಯಲ್ಲಿ ಈ ಸಂಬಂಧ ಚರ್ಚೆ ಮಾಡುವ ಸಾಧ್ಯತೆ ಇದೆ.

ಈ ಸಂಬಂಧ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೊದಲ ಹಂತದಲ್ಲಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಆದ್ಯತೆ ನೀಡುವಂತೆ ಪ್ರಸ್ತಾಪ ಮಾಡುತ್ತೇನೆ ಎಂದಿದ್ದಾರೆ‌. ಇದೆ ವೇಳೆ ಬರ ಪರಿಹಾರದ ವಿಚಾರವಾಗಿ ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದು, ಕುಮಾರಸ್ವಾಮಿಗೆ ಏನು ಗೊತ್ತಿಲ್ಲ. 800 ಕೋಟಿ ಹಣ ಹೆಚ್ಚಿಗೆ ಇದೆ. ಅದನ್ನು ಬಿಡುಗಡೆ ಮಾಡಿದ್ದೇವೆ‌. ಕೇಂದ್ರದಿಂದ ಕೂಡ ಪರಿಹಾರ ಕೇಳಿದ್ದೇವೆ, ಆದರೆ ಆ ಕಡೆಯಿಂದ ಇನ್ನು ಬಿಡುಗಡೆಯಾಗಿಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment