Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಮೇಶ್ ಜಾರಕಿಹೊಳಿ ಸಮಾಧಾನ ಮಾಡಲು ಯತ್ನ : ರಾಜ್ಯಾಧ್ಯಕ್ಷ ಮಾಡಿದ್ದು ಬಿಎಸ್ವೈ ಅಲ್ಲ ಅಂದ್ರು ವಿಜಯೇಂದ್ರ

---Advertisement---

ಬೆಂಗಳೂರು: ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಜೋರಾಗಿಯೇ ಕಾಣುತ್ತಿದೆ. ಅದರಲ್ಲೂ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಮೇಲೆ ಮುನಿಸಿಕೊಂಡವರ ಸಂಖ್ಯೆ ಕೂಡ ಹೆಚ್ಚಾಗಿದೆ. ಹಿರಿಯ ನಾಯಕರೇ ಬೇಸರ ಮಾಡಿಕೊಂಡಿದ್ದು, ಇದೀಗ ಹಿರಿಯರ ಮುನಿಸನ್ನು ಶಮನ ಮಾಡುವ ಕೆಲಸದಲ್ಲಿ ವಿಜಯೇಂದ್ರ ಅವರು ಬ್ಯುಸಿಯಾಗಿದ್ದಾರೆ.

ಅದರ ಭಾಗವಾಗಿಯೇ ಇಂದು ವಿಜಯೇಂದ್ರ ಅವರು, ರಮೇಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಸವಿದಿದ್ದಾರೆ. ಅದರ ನಡುವೆಯೇ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಭೇಟಿ, ಮಾತುಕತೆ ಬಳಿಕ ಮಾತನಾಡಿದ ವಿಜಯೇಂದ್ರ ಅವರು, ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದೇನೆ. ಅವರಲ್ಲಿ ಸಣ್ಣ ಪುಟ್ಟ ಗೊಂದಲಗಳಿತ್ತು. ಪಕ್ಷದ ಅಧ್ಯಕ್ಷರಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಕರ್ತವ್ಯ ಎಂದಿದ್ದಾರೆ.

ಇದೆ ವೇಳೆ ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಸಂಸದರನ್ನು ಆಯ್ಕೆ ಮಾಡಿ ಕಳುಹಿಸುವುದು ನಮ್ಮ ಜವಬ್ದಾರಿಯಾಗಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ಅವರು ಕೂಡ ಕೆಲಸ ಮಾಡುತ್ತೇನೆ ಎಂದಿದ್ದಾರೆ. ನಮ್ಮೆಲ್ಲರ ಗುರಿ ಒಂದೇ. ಮತ್ತೆ ದೇಶದಲ್ಲಿ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವುದು. ಈ ನಿಟ್ಟಿನಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದೇನೆ ಎಂದಿದ್ದಾರೆ.

ರಮೇಶ್ ಜಾರಕಿಹೊಳಿ ಅವರಿಗೆ ವಿಜಯೇಂದ್ರ ಅವರು ಅಧ್ಯಕ್ಷರಾಗಿದ್ದು, ಒಪ್ಪಿಗೆ ಇಲ್ಲ. ತಮಗಿಂತ ಚಿಕ್ಕವರ ಜೊತೆಗೆ ಕೆಲಸ ಮಾಡುವುದು ಹೇಗೆ. ಹಿರಿಯರನ್ನು ನೇಮಕ ಮಾಡಿದ್ದರೆ ನಮಗೆ ಯಾವುದೇ ಬೇಸರವಾಗುತ್ತಿರಲಿಲ್ಲ ಎಂದು ಮನಸ್ಸಿನ ಬೇಸರವನ್ನು ಹೊರ ಹಾಕಿದ್ದರು. ಇದೀಗ ವಿಜಯೇಂದ್ರ ಅವರೇ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸಮಾಧಾನ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment