Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊಳಕಾಲ್ಮೂರು | ನವೆಂಬರ್ 25 ರಂದು ರಾಂಪುರದಲ್ಲಿ ಗಡಿ ಸಾಂಸ್ಕೃತಿಕ ಉತ್ಸವ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಮೊಳಕಾಲ್ಮೂರು ತಾಲ್ಲೂಕು ರಾಂಪುರ ಗ್ರಾಮದಲ್ಲಿ ನ.25 ರಂದು ಶನಿವಾರ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಗಡಿ ಸಾಂಸ್ಕøತಿಕ ಉತ್ಸವ ಜರುಗಲಿದೆ.

ರಾಂಪುರ ಗ್ರಾಮದಲ್ಲಿ ಶನಿವಾರ 32 ವರ್ಷಗಳ ನಂತರ ಗಡಿ ಉತ್ಸವ ಜರುಗಲಿದೆ. ಬೆಳಗ್ಗೆ 9 ಗಂಟೆಗೆ ಎಸ್‍ಪಿಎಸ್‍ಆರ್ ಸಂಸ್ಥೆಯ ಸ್ಥಳದಿಂದ ಬೃಹತ್ ಮೆರವಣಿಗೆ ಆರಂಭವಾಗಲಿದೆ. ಅಲಂಕೃತ ಬೆಳ್ಳಿ ರಥದಲ್ಲಿ ಭುವನೇಶ್ವರಿ ಯ ಮೆರವಣಿಗೆ ಜರುಗಲಿದೆ.

ಮೆರವಣಿಗೆಯಲ್ಲಿ ಡೊಳ್ಳು, ಕಹಳೆ, ಸೋಬಾನೆ ಪದ,ಕೋಲಾಟ,ಟ್ರಾಷ್ ವಾದ್ಯಗಳು ಸೇರಿದಂತೆ ನಾನಾ ಕಲಾ ತಂಡಗಳು ಭಾಗವಹಿಸಲಿವೆ.

ಮೆರವಣಿಗೆಯು ಎಸ್‍ಪಿಎಸ್ ಆರ್ ಶಾಲೆ,ಗ್ರಾಪಂ ಕಚೇರಿ ಮೂಲಕ ಎಸ್.ಜಿ.ಎಂ. ಶಾಲೆ ತಲುಪಲಿದೆ.  ಎಸ್.ಜಿ.ಎಂ. ವಿದ್ಯಾಪೀಠ ಶಾಲೆಯ ಆವರಣದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ.

ಶಾಸಕ ಎನ್.ವೈ.ಗೋಪಾಲಕೃಷ್ಣ, ಗ್ರಾಪಂ ಅಧ್ಯಕ್ಷೆ ಟಿ.ನಾಗವೇಣಿ ರವಿಶಂಕರ್. ತಹಸೀಲ್ದಾರ್ ಎಂ.ವಿ.ರೂಪ, ಬಿಇಒ ಇ.ನಿರ್ಮಲಾದೇವಿ ಸೇರಿದಂತೆ ನಾನಾ ಜನಪ್ರತಿನಿಧಿಗಳು ಮತ್ತು ಗಣ್ಯರು ಭಾಗವಹಿಸಲಿದ್ದಾರೆ.

ಸಾಹಿತ್ಯಾಸಕ್ತರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ
ಕೆ.ಎಂ.ಶಿವಸ್ವಾಮಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!