Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮೊಳಕಾಲ್ಮೂರು | ನವೆಂಬರ್ 25 ರಂದು ರಾಂಪುರದಲ್ಲಿ ಗಡಿ ಸಾಂಸ್ಕೃತಿಕ ಉತ್ಸವ

---Advertisement---

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಮೊಳಕಾಲ್ಮೂರು ತಾಲ್ಲೂಕು ರಾಂಪುರ ಗ್ರಾಮದಲ್ಲಿ ನ.25 ರಂದು ಶನಿವಾರ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಗಡಿ ಸಾಂಸ್ಕøತಿಕ ಉತ್ಸವ ಜರುಗಲಿದೆ.

ರಾಂಪುರ ಗ್ರಾಮದಲ್ಲಿ ಶನಿವಾರ 32 ವರ್ಷಗಳ ನಂತರ ಗಡಿ ಉತ್ಸವ ಜರುಗಲಿದೆ. ಬೆಳಗ್ಗೆ 9 ಗಂಟೆಗೆ ಎಸ್‍ಪಿಎಸ್‍ಆರ್ ಸಂಸ್ಥೆಯ ಸ್ಥಳದಿಂದ ಬೃಹತ್ ಮೆರವಣಿಗೆ ಆರಂಭವಾಗಲಿದೆ. ಅಲಂಕೃತ ಬೆಳ್ಳಿ ರಥದಲ್ಲಿ ಭುವನೇಶ್ವರಿ ಯ ಮೆರವಣಿಗೆ ಜರುಗಲಿದೆ.

ಮೆರವಣಿಗೆಯಲ್ಲಿ ಡೊಳ್ಳು, ಕಹಳೆ, ಸೋಬಾನೆ ಪದ,ಕೋಲಾಟ,ಟ್ರಾಷ್ ವಾದ್ಯಗಳು ಸೇರಿದಂತೆ ನಾನಾ ಕಲಾ ತಂಡಗಳು ಭಾಗವಹಿಸಲಿವೆ.

ಮೆರವಣಿಗೆಯು ಎಸ್‍ಪಿಎಸ್ ಆರ್ ಶಾಲೆ,ಗ್ರಾಪಂ ಕಚೇರಿ ಮೂಲಕ ಎಸ್.ಜಿ.ಎಂ. ಶಾಲೆ ತಲುಪಲಿದೆ.  ಎಸ್.ಜಿ.ಎಂ. ವಿದ್ಯಾಪೀಠ ಶಾಲೆಯ ಆವರಣದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ.

ಶಾಸಕ ಎನ್.ವೈ.ಗೋಪಾಲಕೃಷ್ಣ, ಗ್ರಾಪಂ ಅಧ್ಯಕ್ಷೆ ಟಿ.ನಾಗವೇಣಿ ರವಿಶಂಕರ್. ತಹಸೀಲ್ದಾರ್ ಎಂ.ವಿ.ರೂಪ, ಬಿಇಒ ಇ.ನಿರ್ಮಲಾದೇವಿ ಸೇರಿದಂತೆ ನಾನಾ ಜನಪ್ರತಿನಿಧಿಗಳು ಮತ್ತು ಗಣ್ಯರು ಭಾಗವಹಿಸಲಿದ್ದಾರೆ.

ಸಾಹಿತ್ಯಾಸಕ್ತರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ
ಕೆ.ಎಂ.ಶಿವಸ್ವಾಮಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment