Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆ ಶಿವಕುಮಾರ್ ಸತ್ಯ ಹರಿಶ್ಚಂದ್ರ ಎಂದು ಸಾಬೀತುಪಡಿಸಲು ಅವಕಾಶವಿದೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡ ನಿರ್ಧಾರ ಸಂಪೂರ್ಣ ಕಾನೂನುಬಾಹಿರವಾಗಿದೆ ಎಂದು ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಶಿವಕುಮಾರ್ ಅವರು ಸತ್ಯ ಹರಿಶ್ಚಂದ್ರ ಎಂದು ಸಾಬೀತು ಪಡಿಸಲು ಇನ್ನು ಅವಕಾಶವಿದೆ ಎಂದು ತಿಳಿಸಿದ್ದಾರೆ.

 

ಈ ಬಗ್ಗೆ ಮಾತನಾಡಿದ ವಿಜಯೇಂದ್ರ ಅವರು, ಜನತೆಯ ಮುಂದೆ‌ ನೀವೂ ತಪ್ಪು ಮಾಡಿಲ್ಲ ಎಂದು ತನಿಖೆ ಎದುರಿಸಿ ಸಾಬೀತುಪಡಿಸಿ ತೋರಿಸಿ. ಆದಾಯ ತೆರಿಗೆ ದಾಳಿಯಾದಾಗ ಬೆಂಗಳೂರು ಮತ್ತು ವಿವಿದೆಡೆ ಲಭಿಸಿದ ಹಣದ ವಿಷಯ ಎಲ್ಲರಿಗೂ ಗೊತ್ತು. ಇಡಿ ಕೂಡ ಹಲವು ವರ್ಷಗಳ ತನಿಖೆ ನಡೆಸಿದೆ. ಕ್ಯಾಬಿನೆಟ್ ನಿರ್ಧಾರ ಸಂಪೂರ್ಣವಾಗಿ ತಪ್ಪು ನಿರ್ಧಾರವಾಗಿದೆ ಎಂದಿದ್ದಾರೆ.

 

ಕಾಂಗ್ರೆಸ್ ಪಕ್ಷದ ನಿರ್ಧಾರ ದುರದೃಷ್ಟಕರ ಹಾಗೂ ಬಿಜೆಪಿ ಈ ನಿರ್ಧಾರವನ್ನು ಖಂಡಿಸುತ್ತದೆ. ಇದು ಕಾನೂನಿನ ವಿರುದ್ಧ ತೆಗೆದುಕೊಂಡಿರುವ ನಿರ್ಧಾರವಾಗಿದೆ. ಡಿಕೆ ಶಿವಕುಮಾರ್ ಯಾಕಾಗಿ ತನಿಖೆಗೆ ಭಯ ಪಡುತ್ತಾರೆ..? ಅವರಿಗೆ ಕಾನೂನಿನ ಮೇಲೆ ವಿಶ್ವಾಸ ಇಲ್ಲವೆ..? ತಾವು ಹಲವು ವರ್ಷಗಳಿಂದ ನಿರಂತರವಾಗಿ ಕಾನೂನು ಹೋರಾಟ ಮಾಡುತ್ತ ಬರುತ್ತಿದ್ದೀರಿ. ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಜವಾಬ್ದಾರಿಯ ಸ್ಥಾನದಲ್ಲಿರುವ ಡಿ.ಕೆ.ಶಿವಕುಮಾರ್ ಅವರು ಪ್ರಾಮಾಣಿಕವಾಗಿ ಇದ್ದರೆ ಕ್ಯಾಬಿನೆಟ್ ಕೈಗೊಳ್ಳುವ ಈ ತೀರ್ಮಾವನ್ನು ವಿರೋಧಿಸಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!