Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಶಿಕ್ಷಣ ಪಡೆಯಬೇಕು : ಬಸವಪ್ರಭು ಸ್ವಾಮೀಜಿ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ. ನ.24 :  ವಿದ್ಯಾರ್ಥಿಗಳು ಓದಿನ ಜತೆಗೆ ಪಠ್ಯೇತರ ಅಂದರೆ ಕಲೆ,ಕ್ರೀಡೆ, ನೈತಿಕ ಶಿಕ್ಷಣ ಪಡೆಯುವ ಮೂಲಕ ಬೌದ್ಧಿಕ ಮತ್ತು ಭೌತಿಕ ಸಮತೋಲನ ಕಾಯ್ದುಕೊಳ್ಳುವತ್ತ ಗಮನ ಹರಿಸಿದರೆ ಜೀವನದಲ್ಲಿ ಯಶಸ್ಸು  ಕಾಣಬಹುದು ಎಂದು ದಾವಣಗೆರೆ ವಿರಕ್ತಮಠದ ,ಹಾಗೂ ಚಿತ್ರದುರ್ಗ ಮುರುಘಾಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಅವರು ಸಲಹೆ ನೀಡಿದರು.

ನಗರದ ಎಸ್ ಜೆ ಎಂ ಪಾಲಿಟೆಕ್ನಿಕ್ (ಅನುದಾನಿತ) ನಲ್ಲಿ 2023-24 ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇಲ್ಲಿನ ಎಸ್ ಜೆ

ಎಂಐಟಿ  ಕ್ರೀಡಾಂಗಣದಲ್ಲಿ   ಚಾಲನೆ ನೀಡಿ ಮಾತಾನಾಡಿದ ಶ್ರೀಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಎರಡರಲ್ಲೂ ನೀವು ಯಶಸ್ಸು ಪಡೆಯಬೇಕು. ಓದು ವೇದನೆಯೂ ಆಗಬಾರದು ಪಠ್ಯೇತರ ಶೋಕಿಯೂ ಆಗಬಾರದೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾಲೇಜಿನ ಪ್ರಾಚಾರ್ಯರಾದ ಎಸ್. ವಿ.ರವಿಶಂಕರ್, ವಿಭಾಗಗಳ ಮುಖ್ಯಸ್ಥರುಗಳಾದ ಮಮ್ತಾಜ್ ಬೇಗಂ,ಚನ್ನಕೇಶವ, ರಘು, ನಳಿನಾಕ್ಷಿ,ಮೋಹನ್ ಸೇರಿದಂತೆ ಹಿರಿಯ ಉಪನ್ಯಾಸಕರಾದ ಅನಂತನಾರಾಯಣ,ಗೋವಿಂದರಾಜು, ಪ್ರಶಾಂತ್,ಪ್ರತಿಮಾ, ಧರ್ಮೇಂದ್ರ ಅವರುಗಳು  ಭಾಗವಹಿಸಿದ್ದರು.

ಅಂಪೈರ್ ಅರುಣ್, ದೈಹಿಕ ನಿರ್ದೇಶಕ ಕುಮಾರಸ್ವಾಮಿ ಕಾಲೇಜಿನ ಬೋಧಕರು ಬೋಧಕೇತರ ಸಿಬ್ಬಂದಿ ಹಾಗೂ , ವಿದ್ಯಾರ್ಥಿಗಳು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!