ವರದಿ ಮತ್ತು ಫೋಟೋ ಕೃಪೆ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ. ನ.24: ನಗರದ ವಿವಿಧೆಡೆ ಇರುವ ಸಾರ್ವಜನಿಕ ಶೌಚಾಲಯಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಶುಕ್ರವಾರ ಭೇಟಿ ನೀಡಿ ಸ್ವಚ್ಛತೆ ಹಾಗೂ ಮೂಲಸೌಲಭ್ಯಗಳ ಪರಿಶೀಲನೆ ನಡೆಸಿದರು.

ನಗರದ ಸಂತೆಹೊಂಡದ ಸಮೀಪ, ಖಾಸಗಿ ಬಸ್ನಿಲ್ದಾಣದ ಬಳಿ ಇರುವ ಸಾರ್ವಜನಿಕ ಶೌಚಾಲಯಗಳಿಗೆ ಧಿಡೀರ್ ಭೇಟಿ ನೀಡಿ ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲಿಸಿದರು.
ನಗರಸಭೆಯ ಸಾರ್ವಜನಿಕ ಶೌಚಾಲಯಗಳು ಶುಚಿತ್ವವಿಲ್ಲದೇ ದುರ್ವಾಸನೆ ಬರುತ್ತಿದ್ದು ಮತ್ತು ಸರಿಯಾದ ನಿರ್ವಹಣೆ ಇಲ್ಲದೇ ಇರುವುದು ಕಂಡುಬಂದಿದ್ದರಿಂದ ಅಸಮಾಧಾನ ವ್ಯಕ್ತಪಡಿಸಿದ ಅವರು, ಶೌಚಾಲಯ ಶುಚಿತ್ವ ಹಾಗೂ ನಿರ್ವಹಣೆಯನ್ನು ಕಾಪಾಡಲು ನಗರಸಭೆಯು ವಿಫಲವಾಗಿರುತ್ತದೆ ಹಾಗೂ ಇದರ ಜವಾಬ್ದಾರಿಯನ್ನು ಹೊಂದಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿದರೂ ಸಹ ಕರೆ ಸ್ವೀಕರಿಸಿರುವುದಿಲ್ಲ ಎಂಬುದಾಗಿ ಬೇಸರಪಟ್ಟರು.
ಒಟ್ಟಾರೆ ನಗರದ ಸಾರ್ವಜನಿಕ ಶೌಚಾಲಯಗಳ ದುಸ್ಥಿತಿಯ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಅಸಮಾಧಾನ ವ್ಯಕ್ತಪಡಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















