Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದಗಂಗಾ ಶ್ರೀಗಳ ಮುಂದೆ ಅಮಿತ್ ಶಾ ಬಗ್ಗೆ ಅಳಲು ತೋಡಿಕೊಂಡ ವಿ ಸೋಮಣ್ಣ..!

---Advertisement---

ತುಮಕೂರು: ವಿ ಸೋಮಣ್ಣ ಸದ್ಯ ಬಿಜೆಪಿಯಲ್ಲಿ ಅಸಮಾಧಾನಗೊಂಡವರಾಗಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ. ಇದರ ನಡುವೆ ವಿ ಸೋಮಣ್ಣ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದು, ಶ್ರೀಗಳನ್ನು ಭೇಟಿ ಮಾಡಿ, ಮನಸ್ಸಿನ ಬೇಸರ ತೋಡಿಕೊಂಡಿದ್ದಾರೆ.

ಸಿದ್ದಗಂಗಾ ಶ್ರೀಗಳ ಜೊತೆಗೆ ಮಾತನಾಡಿದ ವಿ ಸೋಮಣ್ಣ, ವಿಧಾನಸಭಾ ಚುನಾವಣಾ ವೇಳೆ ನನಗೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದು ಇಷ್ಟ ಇರಲಿಲ್ಲ. ಇಲ್ಲಿ ಬಿಟ್ಟು ಅಲ್ಲಿಗೆ ಹೋಗಿ ಸ್ಪರ್ಧೆ ಮಾಡಿದ್ದೇ ನನ್ನ ದೊಡ್ಡ ಅಪರಾಧ. ಅಮಿತ್ ಶಾ ಮನೆಯಲ್ಲಿ ಕೂತುಕೊಂಡು ಜೀವ ತೆಗೆದರು. ಬರೋಬ್ಬರಿ ಎರಡು ಗಂಟೆಗಳ ಕಾಲ ಮನೆಯಲ್ಲಿಯೇ ಕುಳಿತುಕೊಂಡರು. ಆಗ ಏನು ಮಾಡಲಿ. ಆಗಲ್ಲ ಎಂದು ಹೇಳಿದೆ. ಬಳಿಕ ಪಿಎಂ ದೆಹಲಿಗೆ ಕರೆಸಿಕೊಂಡು, ನಾಲ್ಕು ದಿನ ಇರಿಸಿಕೊಂಡು, ನೀನು ನಿಂತುಕೋ ಎಂದು ಹೇಳಿದರು. ಆಗ ನಾನು ಏನು ಮಾಡಲಿ..? ಎಂದು ಸಿದ್ದಗಂಗಾ ಶ್ರೀಗಳ ಬಳಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ವಿ ಸೋಮಣ್ಣ ಬಿಜೆಪಿಯನ್ನು ತೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಅಸಮಾಧಾನಿತ ಹಿರಿಯರನ್ನು ಸಮಾಧಾನ ಮಾಡಿ, ಪಕ್ಷ ಸಂಘಟನೆ ಮಾಡುವಂತ ಗಮನ ಹರಿಸುತ್ತಿದ್ದಾರೆ. ವಿ ಸೋಮಣ್ಣ ಅವರ ಮನಸ್ಸನ್ನು ಒಲಿಸುತ್ತಾರಾ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment