Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ : ಅಂಬೇಡ್ಕರ್ ಎಚ್ಚರಿಕೆಯ ಮಾತು ನೆನೆದ ಸಿಎಂ

---Advertisement---

ಬೆಂಗಳೂರು: ಇಂದು ಭಾರತ ಸಂವಿಧಾನದ ದಿನ. ಈ ವಿಶೇಷವಾದ ದಿನದಂದು ಸಿಎಂ ಸಿದ್ದರಾಮಯ್ಯ ಅವರು, ವಿಧಾನಸೌಧದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಅಂಬೇಡ್ಕರ್ ಅವರ ನುಡಿಗಳನ್ನು ನೆನಪಿಸಿಕೊಂಡಿದ್ದಾರೆ.

ಭಾರತ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ಭಾರತ ದೇಶದ ಎಲ್ಲರ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೆ ಸಂವಿಧಾನದ ಮೂಲ ಆಶಯ. ಇಂದು ಸಂವಿಧಾನ ಅಂಗೀಕಾರವಾದ ದಿನ. 1949ರ ನವೆಂಬರ್ 26ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ. ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು.

ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರು, ಸರಿಯಾದವರ ಕೈಗಳಲ್ಲಿ ಸಂವಿಧಾನ ಇರದೆ ಇದ್ದರೆ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನ ಧೈಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ. ರಾಷ್ಟ್ರಕವಿ ಕುವೆಂಪು ಹೇಳಿದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’ ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು ಮಹಾತ್ಮಾ ಗಾಂಧಿ, ಜವಾಹರ್ ಲಾಲ್ ನೆಹರೂ ಅವರು ಕನಸು ಕಂಡಿದ್ದರು. ನಮ್ಮ ಸರ್ಕಾರದ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಸಂವಿಧಾನದ ಪೀಠಿಕೆಯಲ್ಲಿ ಇದರ ಸಾರವಿದೆ. ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment