Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಯಾವತಿ ಮುಗಿಸಿದ ಬಿಜೆಪಿಗೆ ಹೆಚ್ಡಿಕೆ ಯಾವ ಲೆಕ್ಕ : ಕಾಂಗ್ರೆಸ್ ಶಾಸಕ ಬಾಲಕೃಷ್ಣ

---Advertisement---

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಸಜ್ಜಾಗಿವೆ. ಬಿಜೆಪಿ ಬಗ್ಗೆ ಇದೀಗ ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ ಕಿಡಿಕಾರಿದ್ದಾರೆ. ಮಾಯಾವತಿ ಮುಗಿಸಿದ ಬಿಜೆಪಿಗೆ ಹೆಚ್ ಡಿ ಕುಮಾರಸ್ವಾಮಿ ಯಾವ ಲೆಕ್ಕ ಎಂದಿದ್ದಾರೆ.

ಮಾಗಡಿ ತಾಲೂಕಿನ ತೂಬಿನಕೆರೆಯಲ್ಲಿ ಮಾತನಾಡಿದ ಬಾಲಕೃಷ್ಣ ಅವರು, ಬಿಜೆಪಿಯವರು ಒಂಥರಾ ಬ್ರಿಟಿಷರು ಇದ್ದ ಹಾಗೇ. ಯಾರು ಪ್ರಬಲರಾಗಿರುತ್ತಾರೋ ಅವರ ಮಧ್ಯೆ ಗುಂಪು ಕಟ್ಟಿ, ಎತ್ತಿಕಟ್ಟಿ ಒಡೆದಾಳುವಂತೆ ಮಾಡುತ್ತಾರೆ. ಒಡೆದಾಳೋ ನೀತಿಯನ್ನು ಬಿಜೆಪಿ ನಾಯಕರು ಅನುಸರಿಸುತ್ತಿದ್ದಾರೆ. ಉತ್ತರ ಪ್ರದೇಶದ ಬಿಎಸ್ಪಿ ರೀತಿ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷವನ್ನು ಅವರು ಮಾಡದಿದ್ದರೆ ನಾನು ನನ್ನ ಹೆಸರನ್ನು ಬದಲಾಯಿಸಿಕೊಳ್ಳುತ್ತೇನೆ. ಜೆಡಿಎಸ್ ನಾಯಕರು ಈಗಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದರೆ ಅವರ ಅಸ್ತಿತ್ವವನ್ನು ಸಂಪೂರ್ಣವಾಗಿ ಮುಗಿಸುವ ಕೀರ್ತಿ ಬಿಜೆಪಿಯವರಿಗೆ ಸಲ್ಲುತ್ತದೆ ಎಂದಿದ್ದಾರೆ.

ಮಾಯಾವತಿಯೇ ಮುಂದಿನ ಪ್ರಧಾನಿ ಎಂಬಂತೆ ಹೊರಹೊಮ್ಮಿದ್ದರು. ಆದರೆ ಅಂಥವರನ್ನೇ ಉತ್ತರಪ್ರದೇಶದಲ್ಲಿ ಹೆಸರಿಲ್ಲದಂತೆ ಬಿಜೆಪಿ ಮಾಡಿ, ಅಧಿಕಾರ ಮಾಡುತ್ತಿದ್ದಾರೆ. ಇನ್ನೂ ಕರ್ನಾಟಕದ ಕುಮಾರಣ್ಣ ಯಾವ ಲೆಕ್ಕ. ಕುಮಾರಣ್ಣನಿಗೆ ನಾವೇ ಕಾಣುತ್ತೇವೆ. ನಮ್ಮನ್ನು ನೋಡಿದ ತಕ್ಷಣ ಬಿಜೆಪಿಯವರನ್ನ ತಬ್ಬಿಕೊಳ್ಳುತ್ತಾರೆ. ಅನೇಕ ವರ್ಷಗಳಿಂದ ನಾವು ಜಾತ್ಯಾತೀತ ಎಂದು ಹೇಳಿ ಮಾಜಿ ಪ್ರಧಾನಿ ದೇವೇಗೌಡರನ್ನು ಇಳಿವಯಸ್ಸಿನಲ್ಲಿ ಕೋಮುವಾದಿ ಮಾಡಿಬಿಟ್ಟರು ಎಂದು ಶಾಸಕರು ಆರೋಪ ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...