Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಸರ್ಕಾರದಿಂದ ಹಣ ತರು ಧಮ್ ಇದೆಯಾ..? : ಸಚಿವ ಮಧು ಬಂಗಾರಪ್ಪ ಪ್ರಶ್ನೆ

Facebook
Twitter
Telegram
WhatsApp

ಶಿವಮೊಗ್ಗ: ರಾಜ್ಯಾದ್ಯಂತ ಬೆಳೆದ ಬೆಳೆ ನಾಶವಾಗಿ, ಬರಗಾಲದ ಛಾಯೆ ಮೂಡಿದೆ. ರಾಜ್ಯ ಸರ್ಕಾರದಿಂದ ಈಗಾಗಲೇ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಒಂದು ಪೈಸೆಯನ್ನು ಪರಿಹಾರ ನೀಡಿಲ್ಲ ಎಂದು ಸಚಿವರು ಹೇಳಿದ್ದಾರೆ. ಇದೀಗ ಸಚಿವ ಮಧು ಬಂಗರಪ್ಪ ಪರಿಹಾರದ ವಿಚಾರಕ್ಕೆ ಸವಾಲು ಹಾಕಿದ್ದಾರೆ. ಕೇಂದ್ರ ಸರ್ಕಾರದಿಂದ ಹಣ ತರುವ ಧಮ್, ತಾಕತ್ ಯಾರಿಗೆ ಇದೆ ಎಂದು ಬಿಜೆಪಿ ಸಂಸದರಿಗೆ ಪ್ರಶ್ನೆ ಮಾಡಿದ್ದಾರೆ.

 

ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕೇಂದ್ರ ಸರ್ಕಾರಕ್ಕೆ ಕನಿಷ್ಠ ಸೌಜನ್ಯವೂ ಇಲ್ಲ. ನಮ್ಮ ರಾಜ್ಯದ ಸಚಿವರು ದೆಹಲಿಗೆ ಹೋದರೂ, ಅಧಿಕಾರಿಗಳನ್ನು ಮಾತನಾಡಿಸಲು ಆಗಲ್ಲ. ಈಗಾಗಲೇ ಬರಗಾಲದ ನಿರ್ವಹಣೆಯನ್ನು ಮಾಡಲು ಸರ್ಕಾರ ಕ್ರಮವಹಿಸಿದೆ. ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ. ಒಂದು ತಿಂಗಳ ಬಳಿಕ ತೊಂದರೆಯಾಗಬಹುದು. ಅದು ನೀರಿಗೆ ಸಮಸ್ಯೆಯಾಗಬಹುದು. ಮೇವಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ.

 

ಖಜಾನೆಯಲ್ಲಿ ದುಡ್ಡಿಲ್ಲ, ರಾಜ್ಯದಲ್ಲಿ ವಿದ್ಯುತ್ ಇಲ್ಲ ಅಂತ ಬಿಜೆಪಿಯವರು ಅಪಪ್ರಚಾರ ಮಾಡಿದರು. ಅಂತಹ ಸಮಸ್ಯೆ ಎಲ್ಲಾ ಏನು ಇಲ್ಲ. ಖಜಾನೆಯಲ್ಲಿ ಹಣವೂ ಇದೆ, ರೈತರಿಗೆ ನೀಡಲು ವಿದ್ಯುತ್ ಕೂಡ ಇದೆ. ರೈತರಿಗೆ ಏಳು ಗಂಟೆಗಳ ಕಾಲ ವಿದ್ಯುತ್ ನೀಡುತ್ತಿದ್ದೇವೆ‌. ಮುಂದೆ ನಿರಂತರವಾಗಿ ನೀಡುತ್ತೇವೆ. ನಗರದಲ್ಲೂ ಲೋಡ್ ಶೆಡ್ಡಿಂಗ್ ಎಲ್ಲೂ ಮಾಡ್ತಿಲ್ಲ. ಕಳೆದ ತಿಂಗಳಿನಿಂದ ವಿದ್ಯುತ್ ಬಳಕೆ ಶೇಕಡ 90 ರಷ್ಟು ಹೆಚ್ಚಾಗಿದೆ ಎಂದಿದ್ದಾರೆ. ಇದೇ ವೇಳೆ ಸೊರಬ ಪಟ್ಟಣಕ್ಕೆ ಸದ್ಯಕ್ಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯ 238 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

    ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ…!

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ರೇವಣ್ಣಗೆ ಸಿಕ್ತು ಷರತ್ತು ಬದ್ಧ ಜಾಮೀನು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಮಹಿಳೆಯಿಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ರೇವಣ್ಣ ಅರೆಸ್ಟ್ ಆಗಿದ್ದು, ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಕೋರ್ಟ್ ನಲ್ಲಿ ರೇವಣ್ಣ

error: Content is protected !!