Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂತ್ರಾಲಯ ಮಠಕ್ಕೆ ಭಕ್ತರಿಂದ ಹೆಲಿಕಾಪ್ಟರ್ ಕೊಡುಗೆ

Facebook
Twitter
Telegram
WhatsApp

ಸುದ್ದಿಒನ್, ಬೆಂಗಳೂರು :  ಭಕ್ತರೊಬ್ಬರು ಮಂತ್ರಾಲಯ ರಾಘವೇಂದ್ರಸ್ವಾಮಿ ಮಠಕ್ಕೆ ಹೆಲಿಕಾಪ್ಟರ್ ನೀಡುವುದಾಗಿ ತಿಳಿಸಿದ್ದಾರೆ. 

ರಾಮನಗರದ ಶ್ರೀ ಫೌಂಡೇಶನ್ ಸಂಸ್ಥಾಪಕ ಸುರೇಶ್ ಅವರು ಮಂತ್ರಾಲಯದ ಪೀಠಾಧ್ಯಕ್ಷರಾದ ಶ್ರೀ ಸುಬುದೇಂದ್ರ ತೀರ್ಥರಿಗೆ ಹೆಲಿಕಾಪ್ಟರ್ ಕೊಡುಗೆಯಾಗಿ ನೀಡಲಾಗುವುದು ಎಂದು ಹೇಳಿದರು.

ಈ ಕುರಿತು ನವೆಂಬರ್ 24ರಂದು ಮಂತ್ರಾಲಯಕ್ಕೆ ತೆರಳಿ ಶ್ರೀಗಳೊಂದಿಗೆ ಚರ್ಚಿಸಿದ್ದೇನೆ ಎಂದರು. ಬೆಂಗಳೂರಿನಿಂದ 50 ಕಿ.ಮೀ ದೂರದಲ್ಲಿ ರೂ.300 ಕೋಟಿ ವೆಚ್ಚದಲ್ಲಿ 253 ಅಡಿ ಎತ್ತರದ ರಾಘವೇಂದ್ರ ಸ್ವಾಮಿಯ ವಿಗ್ರಹ ನಿರ್ಮಿಸಲಾಗುತ್ತಿದೆ ಎಂದರು.

ಶ್ರೀಮಠಕ್ಕೆ ಹೆಲಿಕಾಪ್ಟರ್ ಕೊಡುಗೆ ನೀಡಲಾಗುವುದು ಎಂದು ವಿವರಿಸಿದರು.
ಮೇಲಾಗಿ ಪೀಠಾಧಿಪತಿಗಳ ಅನುಮತಿ ಪಡೆದು ಮಂತ್ರಾಲಯದಲ್ಲಿ ಸೂಚಿಸಿದ ಸ್ಥಳದಲ್ಲಿ ಹೆಲಿಪ್ಯಾಡ್ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸುವುದಾಗಿ ತಿಳಿಸಿದ್ದಾರೆ. ಹೆಲಿಪ್ಯಾಡ್ ಕಾಮಗಾರಿ ಪೂರ್ಣಗೊಂಡರೆ ಸಂಕ್ರಾಂತಿ ಹಬ್ಬಕ್ಕೆ ಮಂತ್ರಾಲಯದ ಶ್ರೀಗಳಿಗೆ ಹೆಲಿಕಾಪ್ಟರ್ ಹಸ್ತಾಂತರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಅಲ್ಲದೇ ಡಿಸೆಂಬರ್ ಮೊದಲ ವಾರದಲ್ಲಿ ಸುಬುದೇಂದ್ರ ತೀರ್ಥರು ಬೆಂಗಳೂರು ಸಮೀಪದ ಶ್ರೀ ರಾಘವೇಂದ್ರ ಸ್ವಾಮಿಯ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳ ಪರಿಶೀಲನೆ ನಡೆಸಿ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಸುರೇಶ್ ಸ್ಪಷ್ಟಪಡಿಸಿದರು.

ಭಕ್ತರ ದೇಣಿಗೆಯಿಂದ ಮಂತ್ರಾಲಯದಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಿಸುವ ಪ್ರಯತ್ನ ನಡೆಯುತ್ತಿದೆ. ಮಂತ್ರಾಲಯಕ್ಕೆ ನೇರ ರೈಲು ಮಾರ್ಗವಿಲ್ಲ. 13 ಕಿಮೀ ದೂರದಲ್ಲಿರುವ ಮಾಧವರಂನಲ್ಲಿ ರೈಲಿನಿಂದ ಇಳಿದು ಮಂತ್ರಾಲಯಕ್ಕೆ ತಲುಪಬೇಕಿದೆ. ಅಲ್ಲದೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕಳೆದ ವರ್ಷ ಕುಟುಂಬ ಸಮೇತ ಭೇಟಿ ನೀಡಿದ್ದರು. ಈ ಹಿಂದೆ ಬಳ್ಳಾರಿಯ ಗಣಿ ಉದ್ಯಮಿಯೊಬ್ಬರು ದೇವಸ್ಥಾನದ ಅಭಿವೃದ್ಧಿಗೆ 90 ಲಕ್ಷ ರೂ. ಮಂತ್ರಾಲಯ ಮಠದಲ್ಲಿ 6 ಕೋಟಿ ರೂಗಳಲ್ಲಿ ಕೈಗೊಂಡ ಶಿಲಾ ಮಂಟಪ ನಿರ್ಮಾಣಕ್ಕೆ ನೆರವಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!