Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸಿದ್ದರಾಮಯ್ಯ ಅವರ ಜನತಾ ದರ್ಶನದ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು..?

---Advertisement---

ಕೊಡಗು: ಸಿಎಂ ಸಿದ್ದರಾಮಯ್ಯ ನಿನ್ನೆ ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು. ರಾಜ್ಯದ ಊರು ಊರುಗಳಿಂದ ಬಂದಿದ್ದಂತ ಜನರ ಸಮಸ್ಯೆಗಳನ್ನು ಸ್ವತಃ ತಾಳ್ಮೆಯಿಂದ ಕೇಳಿದರು. ಈ ಜನತಾ ದರ್ಶನದ ಬಗ್ಗೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಜನತಾ ದರ್ಶನದ ಮೂಲಕ ರಾಜ್ಯದ ಆಡಳಿತ ಹೇಗೆ ನಡೆಯುತ್ತಿದೆ ಎಂಬುದರ ವಾಸ್ತವ ಚಿತ್ರಣ ಈಗ ಸಿಎಂ ಅವರಿಗೆ ಅರಿವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ನಡೆದ ಕಾರ್ಯಕ್ರಮವನ್ನು ಜನತಾ ದರ್ಶನ ಅಲ್ಲ, ಜನತಾ ಸ್ಪಂದನಾ ಎಂದು ತಿಳಿಸಿದ್ದಾರೆ. ಇದಕ್ಕೆ ಅದಕ್ಕೆ‌ ನನಗೆ ತಕರಾರಿಲ್ಲ. ಅಭಿನಂದಿಸುತ್ತೇನೆ. ಎಲ್ಲದಕ್ಕೂ ಸರ್ಕಾರವನ್ನು ಟೀಕೆ ಮಾಡುವುದಕ್ಕೆ ಹೋಗುವುದಿಲ್ಲ ಎಂದಿದ್ದಾರೆ.

 

ಒಬ್ಬ ಮುಖ್ಯಮಂತ್ರಿ ಜನತಾ ಸ್ಪಂದನಾ ನಡೆಸಿದ್ದನ್ನು ನಾನು ಮೆಚ್ಚುತ್ತೇನೆ. ಮುಂದಿನ ಮೂರು ತಿಂಗಳಲ್ಲಿ ಮತ್ತೆ ಜನತಾ ಸ್ಪಂದನಾ ಮಾಡುವುದಾಗಿ ಹೇಳಿದ್ದಾರೆ. ಅಧಿಕಾರಿಗಳಿಗೂ ಸರಿಯಾಗಿ ಕೆಲಸ ಮಾಡುವಂತೆ ಗಡುವು ನೀಡಿದ್ದಾರೆ. 2006ರಲ್ಲಿ ನಾನು ಕೂಡ ಮಧ್ಯರಾತ್ಯಿಯ ತನಕ ಜನತಾ ದರ್ಶನ ನಡೆಸಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಜನತಾ ದರ್ಶನ ನಡೆಸಿ, ಜನರ ಕಷ್ಟಗಳನ್ನು ಆಲಿಸಿದ್ದಾರೆ‌.

 

ಪಕ್ಷದ ಕಾರ್ಯಕರ್ತರ ಸಭೆ ನಡೆಸಲು ಮಡಿಕೇರಿಗೆ ಬಂದಿದ್ದೇನೆ. ನಮ್ಮ ಶಕ್ತಿ ಕಡಿಮೆ ಇರುವುದರಿಂದ ಇಲ್ಲಿ ಕಾಂಗ್ರೆಸ್ ಗೆದ್ದಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆ ಪಕ್ಷ ಸಂಘಟಬೆ ಆಗಬೇಕಿದೆ. ರಾಜ್ಯದಲ್ಲಿ ಮತ್ತೆ ಮೈತ್ರಿ ಸರ್ಕಾರ ಬರಬೇಕೆಂದು ಜನ ಅಭಿಪ್ರಾಯ ಪಟ್ಟಿದ್ದಾರೆ. ಈಗಿರುವ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರಿಗೆ ಬೇಸರವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment