Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಡಿಯೂರಪ್ಪ ಕಣ್ಣೀರು ಹಾಕುವಂತೆ ಮಾಡಿದರು : ಬಿ ಎಲ್ ಸಂತೋಷ್ ವಿರುದ್ಧ ಹಿರಿಯೂರು ತಾಲೂಕು ಮಾಜಿ ಸದಸ್ಯ ಕಿಡಿ

---Advertisement---

ಚಿತ್ರದುರ್ಗ: ಬಿಎಲ್ ಸಂತೋಷ್ ಬಗ್ಗೆ ಬಿಜೆಪಿಯಲ್ಲಿಯೂ ಹಲವರಿಗೆ ಅಸಮಾಧಾನವಿದೆ. ಇದೀಗ ಹಿರಿಯೂರು ತಾಲೂಕು ಪಂಚಾಯ್ತಿಯ ಮಾಜಿ ಸದಸ್ಯ ಜೆಜೆ ಹಳ್ಳಿ ಜಯರಾಮಯ್ಯ ಕಿಡಿಕಾರಿದ್ದಾರೆ. ಬಿಜೆಪಿಯ ಆಂತರಿಕ ವ್ಯವಹಾರಗಳಲ್ಲಿ ಬಿ ಎಲ್ ಸಂತೋಷ್ ಅವರು ಮೂಗು ತೂರಿಸುವುದನ್ನು ತಡೆಯದಿದ್ದರೆ, ರಾಜ್ಯದಲ್ಲಿ ಬಿಜೆಪಿ ನಾಶವಾಗುತ್ತದೆ ಎಂದಿದ್ದಾರೆ.

ಯಡಿಯೂರಪ್ಪ ಅವರು ಸೈಕಲ್ ನಲ್ಲಿ ಸುತ್ತಿ ಪಕ್ಷ ಕಟ್ಟಿದರು. ಆದರೆ ಆರ್ ಎಸ್ ಎಸ್, ಬಿಎಲ್ ಸಂತೋಷ್ ಅವರು ಅಧಿಕಾರದಿಂದ ಕೆಳಗೆ ಇಳಿಯುವಂತೆ ಮಾಡಿದರು. ಯಡಿಯೂರಪ್ಪ ಕಣ್ಣೀರು ಹಾಕುವಂತೆ ಮಾಡಿದರು. ಉತ್ತರ ಕರ್ನಾಟಕದ ಪ್ರಭಾವಶಾಲಿಗಳಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿಗೆ ಟಿಕೆಟ್ ಸಿಗದಂತೆ ಮಾಡಿದರು. ಪಕ್ಷ ತೊರೆಯುವಂತೆ ಮಾಡಿದರು. ಯಡಿಯೂರಪ್ಪ ಮತ್ತು ಲಿಂಗಾಯತರ ಅಗತ್ಯವಿಲ್ಲ ಅಂತ ಚುನಾವಣಾ ವೇಳೆ ದೂರವಿಟ್ಟು ಹಿಂದುತ್ವದ ಮೇಲೆ ಹೋಗುತ್ತೀವಿ ಅಂತ ಹೇಳಿ, ಚುನಾವಣೆಯಲ್ಲಿ ಮಣ್ಣು ಮುಕ್ಕಿದರು ಎಂದಿದ್ದಾರೆ.

ಇದೆ ವೇಳೆ ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಿ, ಮುಂದೆ ಲೋಕಸಭಾ ಚುನಾವಣೆ ಬರುತ್ತಾ ಇದೆ. ಈ ಚುನಾವಣೆಯಲ್ಲೂ ಸಂತೋಷ್ ಕೈಗೆ ಚುಕ್ಕಾಣಿ ನೀಡಿದರೆ, ಬಿಜೆಪಿಗೆ ಹೀನಾಯ ಪರಿಸ್ಥಿತಿ ಬರಲಿದೆ. ರಾಜ್ಯದಲ್ಲಿ ಸಂತೋಷ್ ಅವರ ಮಾತಿಗೆ ಮನ್ನಣೆ ಕೊಡದೆ, ಯಡಿಯೂರಪ್ಪ ಅವರ ಮಾರ್ಗದರ್ಶನದ ಮೂಲಕ ಚುನಾವಣೆ ಎದುರಿಸಬೇಕು ಎಂಬ ಸಲಹೆ ನೀಡಿದ್ದಾರೆ.

ಬಿಜೆಪಿಯ ಹೈಕಮಾಂಡ್ ಈಗಾಗಲೇ ಯಡಿಯೂರಪ್ಪ ಅವರ ಇರುವಿಕೆ ಎಷ್ಟು ಅಗತ್ಯ ಎಂಬುದು ಅರ್ಥವಾಗಿದೆ. ಯಡಿಯೂರಪ್ಪ ಅವರನ್ನು ನಿರ್ಲಕ್ಷ್ಯ ಮಾಡಿದರೆ ಸೋಲು ಎಷ್ಟು ಹೀನಾಯ ಎಂಬ ಅನುಭವವೂ ಆಗಿದೆ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರಿಗೆ ಸಾಕಷ್ಟು ಪ್ರಾಶಸ್ತ್ಯ ನೀಡುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...