Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಎದುರು ಕೆಲ ದಾಖಲೆಗಳನ್ನು ನೀಡುತ್ತೇನೆ : ಕೃಷ್ಣ ಭೈರೇಗೌಡ ವಿರುದ್ಧ ಮತ್ತೊಮ್ಮೆ ಗುಡುಗಿದ ಬಿ ಆರ್ ಪಾಟೀಲ್

Facebook
Twitter
Telegram
WhatsApp

ಕಲಬುರಗಿ: ನಾನು ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ. ನನ್ನಲ್ಲಿ ಯಾವುದೇ ಅಂತರಂಗ, ಬಹಿರಂಗವಿಲ್ಲ. ನಾನು ಸಿಎಂ ಎದುರೇ ಕೆಲ ದಾಖಲೆಗಳನ್ನು ನೀಡುತ್ತೇನೆ ಎಂದು ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಹಿರಿಯ ಶಾಸಕ ಬಿ ಆರ್ ಪಾಟೀಲ್ ಗುಡುಗಿದ್ದಾರೆ.

ಆಳಂದ ಪಟ್ಟಣದಲ್ಲಿ ಮಾತನಾಡಿದ ಬಿ ಆರ್ ಪಾಟೀಲ್, ನಾನೇನು ನ್ಯಾಯಾಂಗ ತನಿಖೆ ಆಯೋಗ ರಚನೆ ಮಾಡಿ ಎಂದಿಲ್ಲ. ಬದಲಾಗಿ ರಾಜಕೀಯವಾಗಿ ಚರ್ಚೆಯಾಗಲಿ, ನಾನು ಎದುರು ಕೆಲ ದಾಖಲೆಗಳನ್ನು ಇಡುತ್ತೇನೆ. ನಾನು ಯಾವುದೇ ರೀತಿಯಲ್ಲೂ ಅವಮಾನ ಮಾಡುವ ಹೇಳಿಕೆಯನ್ನು ನೀಡಿಲ್ಲ. ನಾನು ಅವತ್ತೂ ಸದನದಲ್ಲಿದ್ದೇ, ಗೂಬೆ ಕೂರಿಸುವ ಕೆಲಸ ಮಾಡುತ್ತೀರಾ ಅಂತ ಕೇಳಿದ್ದೆ. ಹೀಗಾಗಿ ಆರೋಪ ಹೊತ್ತು ಸದನಕ್ಕೆ ಹಾಜರಾಗಲ್ಲ ಎಂದು ಹೇಳಿದ್ದೇನೆ.

 

ಪ್ರಿಯಾಂಕ್ ಖರ್ಗೆ ಅವರು ಸಚಿವರಾದ ಮೇಲೆ ನನ್ನ ಕ್ಷೇತ್ರಕ್ಕೆ 10 ಯಾತ್ರಿ ನಿವಾಸ ನೀಡಿದ್ದರು. ಆದರೆ ಅದರಲ್ಲಿ ಒಂದೇ ಒಂದು ಮಾತ್ರ ಪೂರ್ಣಗೊಂಡಿದೆ. ಆ ಬಗ್ಗೆ ಪ್ರಗತಿ ಪರಿಶೀಲನ ಸಭೆ ಕೂಡ ನಡೆದಿಲ್ಲ. ಇನ್ನು ಕೆಲವು ಕಡೆ ಕಳಪೆ ಕೂಡ ಆಗಿದೆ. ಕಳಪೆ ಕಾಮಗಾರಿಯ ಬಗ್ಗೆ ಸ್ವತಃ ಸಚಿವರೇ ಒಪ್ಪಿಕೊಂಡಿದ್ದಲ್ಲ. ಭೂ ಸೇನಾ ನಿಗಮದಲ್ಲಿ ಕೆಲ ನ್ಯೂನ್ಯತೆ ಇದೆ ಎಂದು ಹೇಳಿದ್ದರು. ತಪ್ಪು ಒಪ್ಪಿದ ಮೇಲೆ ಒಬ್ಬ ಮಂತ್ರಿಯಾಗಿ ಅದನ್ನು ಸರಿ ಮಾಡಬೇಕಿತ್ತು. ಈಗ ನನ್ನ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ ಎನ್ನುತ್ತಾರೆ. ಇದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಸಿಎಂ ಬಳಿ ಎಲ್ಲಾ ದಾಖಲೆಗಳನ್ನು ಇಡುತ್ತೀನು ಎಂದು ಸವಾಲು ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!