Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣ ಮಾತನ್ನು ಸರ್ಕಾರ ಪರಿಗಣಿಸಬೇಕು : ಶಾಸಕ ಯತ್ನಾಳ್

---Advertisement---

ಅಧಿಕಾರಿಗಳ ದಾಳಿಯಲ್ಲಿ ಅಂಬಿಕಾಪತಿ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿತ್ತು. ಒಂದಲ್ಲ ಎರಡಲ್ಲ ಬರೋಬ್ಬರಿ 40 ಕೋಟಿ ಹಣ. ಇದೀಗ ಅಂಬಿಕಾಪತಿ ಸಾವಿನ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೀಡಿರುವ ಹೇಳಿಕೆಯನ್ನು ಸರ್ಕಾರ ಪರಿಗಣಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಯತ್ನಾಳ್, ಗುತ್ತಿಗೆದಾರ ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣನವರ ಹೇಳಿಕೆಯನ್ನು ಸರ್ಕಾರ ಹಾಗು ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು. ಅಂಬಿಕಾಪತಿ ಮನೆಯಲ್ಲಿ 40 ಕೋಟಿ ಹಣ ಆದಾಯ ತೆರಿಗೆ ದಾಳಿಯ ವೇಳೆ ಸಿಕ್ಕಿತ್ತು. ಈ ಹಣ ಸರ್ಕಾರ ಪ್ರಭಾವಿ ಮಂತ್ರಿ ಹಾಗು ಒಬ್ಬ ಪ್ರಭಾವಿ ರಾಜಕಾರಣಿಯ ಮಗನಿಗೆ ಸೇರಿದ್ದು ಎಂಬ ಸುದ್ದಿಯೂ ಇದೆ. ಇದಕ್ಕೆ ಸಾಕ್ಷಿಯಾಗಿ ಆ ಪ್ರಭಾವಿ ರಾಜಕಾರಣಿ ಮಗನ ಆಪ್ತ ಸಹಾಯಕನನ್ನು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಒಳಪಡಿಸಿತ್ತು.

ಆದಾಯ ತೆರಿಗೆ ಇಲಾಖೆಗೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಅಂಬಿಕಾಪತಿ ಯಾರ ಹೆಸರುಗಳನ್ನೂ ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ. ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕುಷವಾಗಿ ತನಿಖೆಯಾಗಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಒತ್ತಾಯಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment