Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬೆಳೆ ನಷ್ಟ : ರೈತ ಆತ್ಮಹತ್ಯೆ

---Advertisement---

ಸುದ್ದಿಒನ್, ಕುರುಗೋಡು : ಬೆಳೆ ನಷ್ಟಗೊಂಡು ಸಾಲ ತೀರಿಸಲು ಆಗದೆ ರೈತ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ದಮ್ಮೂರು ಗ್ರಾಮದಲ್ಲಿ ಜರುಗಿದೆ.

ಸಮೀಪದ ದಮ್ಮೂರು ಗ್ರಾಮದ ರೈತ ಮಹಾಂತೇಶ್ (35) ವರ್ಷ ಮೃತ ದುರ್ದೈವಿ ಗುರುವಾರ ರಾತ್ರಿ ಕುಟುಂಬಸ್ಥರು ಗೌರಮ್ಮಗೆ ಆರತಿ ಬೆಳಗಿಕೊಂಡು ಬರಲು ಹೋದ ಸಂದರ್ಭದಲ್ಲಿ ಮನೆಯಲ್ಲಿ ಇರುವ ಪ್ಯಾನ್ ಗೆ ನೇಣು ಹಾಕಿಕೊಂಡು ಮೃತ ಪಟ್ಟಿದ್ದಾನೆ.

ಮೃತ ಮಹಾಂತೇಶ್ ಗೆ ಪತ್ನಿ ಸೇರಿ ಮೂರು ಹೆಣ್ಣು ಮಕ್ಕಳು ಮತ್ತು ಒಬ್ಬ ಪುತ್ರ ನಿದ್ದಾನೆ.

ರೈತ ಮಹಾಂತೇಶ್ ತಮ್ಮ ತಾಯಿ ಹೆಸರಿನಲ್ಲಿ ಇರುವ 3 ಎಕರೆ ಹಾಗೂ ತಮ್ಮನ 1.50 ಎಕರೆ ಮತ್ತು ಹೆಂಡತಿಯ 1 ಎಕರೆ ಭೂಮಿಯಲ್ಲಿ ಮೆಣಿಸಿನ ಕಾಯಿ ಬೆಳೆ ಬಿತ್ತನೆ ಮಾಡಿದ್ದು, ಮಳೆ ಇಲ್ಲದೆ ಹಾಗೂ ಬೆಳೆಗೆ ನೀರು ಸಿಗದ ಪರಿಣಾಮ ಬೆಳೆಗಳು ನಷ್ಟಗೊಂಡಿದ್ದರಿಂದ ಬೆಳೆಗೆ ವ್ಯಯಿಸಿದ ಸಾಲ ತೀರಿಸಲು ಆಗದೆ ಮನನೊಂದು ನೇಣು ಬಿಗಿದುಕೊಂಡಿದ್ದಾನೆ. ಬೆಳೆಗೆ ಅಂತ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ತಾಯಿ ಹೆಸರಲ್ಲಿ 1.50 ಲಕ್ಷ ತಮ್ಮನ ಹೆಸರಲ್ಲಿ 70 ಸಾವಿರ ಕೈ ಸಾಲ 10 ಲಕ್ಷ ಮಾಡಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತ ರೈತನ ಮನೆಗೆ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಹಾಗೂ ಶಾಸಕ ಗಣೇಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ನೀಡಿ ಸರಕಾರದಿಂದ ದೊರಿಯುವ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಈ ಕುರಿತು ತಾಯಿ ಶಂಕ್ರಮ್ಮ ನೀಡಿದ ದೂರಿನ ಮೇರೆಗೆ ಕುರುಗೋಡು ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...