Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯ ರಾಮಕೃಷ್ಣ ಹೆಗಡೆ ನಗರ ತೆರವು :ನಾಳೆ ಸಂಜೆವರೆಗೂ 144 ಸೆಕ್ಷನ್ ಜಾರಿ..!

---Advertisement---

ದಾವಣಗೆರೆ: ರಿಂಗ್ ರೋಡ್ ರಸ್ತೆಯಲ್ಲಿ‌ಕಾಮಗಾರಿ ನಡೆಯುತ್ತಿರುವ ಕಾರಣ ನಾಳೆ‌ ಸಂಜೆ ತನಕ 144 ಸೆಕ್ಷನ್ ಜಾರಿ ಮಾಡಲಾಗಿದೆ. ದಾವಣಗೆರೆ ನಗರದ ಮಾಗಾನಹಳ್ಳಿ ರಸ್ತೆಯಲ್ಲಿರುವ ರಾಮಕೃಷ್ಣ ಹೆಗಡೆ ನಗರ ತೆರವು ಕಾರ್ಯಾಚರಣೆ ಆರಂಭವಾಗಿದೆ. ಹೀಗಾಗಿ ನಾಳೆ ಸಂಜೆವರೆಗೂ 144 ಎಸಕ್ಷನ್ ಜಾರಿ ಮಾಡಲಾಗಿದೆ.

ಈ ಸಂಬಂಧ ದಾವಣಗೆರೆ ಉಪವಿಭಾಗಾಧಿಕಾರಿ ದುರ್ಗಾಶ್ರೀ ಆದೇಶ ಹೊರಡಿಸಿದ್ದಾರೆ. ರಾಮಕೃಷ್ಣ ಹೆಗಡೆ ನಗರದಲ್ಲಿ ಕೆಲವು ಮನೆಗಳನ್ನು ತೆರವು ಮಾಡಲಾಗುತ್ತದೆ. ಪೊಲೀಸರ ಸಮ್ಮುಖದಲ್ಲಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜೆಸಿಬಿ ಮೂಲಕ ಅನೇಕ ಅಲ್ಪಸಂಖ್ಯಾತರ ಮನೆಗಳ ತೆರವು ಕಾರ್ಯಾಚತಣೆ ನಡೆದಿದೆ. ಸುಮಾರು 419ಕ್ಕೂ ಹೆಚ್ಚು ಮನೆಗಳನ್ನು ತೆರವು ಮಾಡಲು ಪ್ಲ್ಯಾನ್ ಮಾಡಲಾಗಿದೆ. ಜೊತೆಗೆ ಕೆಲವರಿಗೆ ಬೇರೆ ಕಡೆ ವಾಸಿಸಲು ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ.

ಮನೆಗಳ ತೆರವಿಗೆ ಹಕ್ಕು ಪತ್ರ ಸಿಗದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮನೆಯಲ್ಲಿರುವ ವಸ್ತುಗಳನ್ನು ತೆಗೆಯದೆ ಬಿಡದೆ ಜೆಸಿಬಿಯಿಂದ ಏಕಾಏಕಿ ಮನೆಗಳನ್ನು ತೆರವು ಮಾಡಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿಯೇ ಪಾಲಿಕೆ ಆಯುಕ್ತೆ ರೇಣುಕಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವೂ ಪೊಲೀಸ್, ಜೆಸಿಬಿ ತಂದರೂ ನಾವೂ ಹೆದರುವುದಿಲ್ಲ. ನೀವೂ ಹಠ ಸಾಧಿಸಿ ಏನು ಸಾಧನೆ ಮಾಡುತ್ತೀರಿ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment