Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾಸ್ಟೆಲ್ ನಲ್ಲಿ ಅವ್ಯವಸ್ಥೆ : ಚಿತ್ರದುರ್ಗದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಡಿ. 04 : ಹಾಸ್ಟೆಲ್ ನಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಹಿನ್ನೆಲೆ ಸಮಾಜ ಕಲ್ಯಾಣ ಇಲಾಖೆ ಕಚೇರಿ ಬಳಿ ಕಾನೂನು ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಸರಸ್ವತಿ ಕಾನೂನು ಕಾಲೇಜಿನ ವಿಧ್ಯಾರ್ಥಿಗಳು ಧವಳಗಿರಿ ಬಡಾವಣೆಯ ಹಾಸ್ಟೆಲ್ ನಲ್ಲಿದ್ದು, ಅವರಿಗೆ ಅಲ್ಲಿ ಕೆಲವು ಮೂಲಭೂತ ಸೌಲಭ್ಯಗಳ ಕೊರತೆ ಇರುವುದಾಗಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ಬಳಿ ತೆರಳಿ ಪ್ರತಿಭಟನೆ ನಡೆಸಿದರು.

ಹಾಸ್ಟೆಲ್‍ನಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಟ್ಯಾಂಕರ್ ಮೂಲಕ ನೀರು ತರಿಸುತ್ತಿದ್ದು ಆ ನೀರು ಕಲುಷಿತಗೊಂಡಿರುತ್ತದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಶುದ್ದ ಕುಡಿಯುವ ನೀರು,
ನಿಲಯ ಪಾಲಕರ ನೇಮಕ, ಮಲಗಲು ಸರಿಯಾದ ಹಾಸಿಗೆ, ಹೊದಿಕೆ ವ್ಯವಸ್ಥೆ, ಗ್ರಂಥಾಲಯದಲ್ಲಿ ಪುಸ್ತಕಗಳನ್ನು ಒದಗಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ಸುಮಾರು 120 ವಿಧ್ಯಾರ್ಥಿಗಳು ಈ ಹಾಸ್ಟೆಲ್ ನಲ್ಲಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ  ಪ್ರತಿಭಟನಾ ಸ್ಥಳಕ್ಕೆ ಇಲಾಖೆಯ ಉಪ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಅವರು ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದು ಶೀಘ್ರವಾಗಿ ಸಮಸ್ಯೆಗಳನ್ನ ಬಗೆಹರಿಸುವ ಭರವಸೆಯನ್ನು ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...