Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೌನ್ ಬನೇಗಾ ತೆಲಂಗಾಣ ಸಿಎಂ ?  ಮುಂದುವರಿದ ಕುತೂಹಲ, ಹತಾಶೆಯಲ್ಲಿ ನಾಯಕರು…!

---Advertisement---

 

ಸುದ್ದಿಒನ್, ಹೈದರಾಬಾದ್ : ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ ಇಂದು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ಆರಂಭಿಸಿದೆ.

ಹೈದರಾಬಾದ್‌ನ ಹೋಟೆಲ್‌ನಲ್ಲಿ ಸಿಎಲ್‌ಪಿ ಸಭೆ ನಡೆಯಿತು. ಪಕ್ಷದ ಎಲ್ಲಾ ವಿಜೇತ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.  ಎಐಸಿಸಿ ವೀಕ್ಷಕರ ಸಮ್ಮುಖದಲ್ಲಿ ಸುಮಾರು ಅರ್ಧ ಗಂಟೆ ಕಾಲ ಸಿಎಲ್‌ಪಿ ಸಭೆ ನಡೆಯಿತು.ಎಐಸಿಸಿ ನೇಮಿಸಿದ್ದ ವೀಕ್ಷಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಕುರಿತು ಪಕ್ಷದ ಶಾಸಕರಿಂದ ಅಭಿಪ್ರಾಯ ಪಡೆದರು.

ಸಿಎಲ್ ಪಿ ನಾಯಕರ ಆಯ್ಕೆ ಜವಾಬ್ದಾರಿ ಹೈಕಮಾಂಡ್ ಗೆ ಬಿಟ್ಟದ್ದು ಎಂದು ನಿರ್ಣಯ ಅಂಗೀಕರಿಸಲಾಯಿತು. ಇದಲ್ಲದೇ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಪಕ್ಷದ ಮುಖಂಡರು ಹಾಗೂ ಪ್ರಮುಖ ನಾಯಕರಿಗೆ ಕೃತಜ್ಞತೆ ಸಲ್ಲಿಸುವ ನಿರ್ಣಯವನ್ನೂ ಅಂಗೀಕರಿಸಲಾಯಿತು. ರೇವಂತ್ ರೆಡ್ಡಿ ಈ ನಿರ್ಣಯಗಳನ್ನು ಮಂಡಿಸಿದರೆ, ತುಮ್ಮಲ ನಾಗೇಶ್ವರ ರಾವ್, ಭಟ್ಟಿ ವಿಕ್ರಮಾರ್ಕ ಮತ್ತಿತರ ಮುಖಂಡರು ಬೆಂಬಲಿಸಿದರು.  ಈ ನಿರ್ಣಯವನ್ನು ವರಿಷ್ಠರಿಗೆ ಕಳುಹಿಸಲಾಗಿದೆ.

ಮತ್ತೊಂದೆಡೆ, ಸಿಎಲ್‌ಪಿ ನಾಯಕರ ಆಯ್ಕೆಯ ಬಗ್ಗೆ ವರಿಷ್ಠರು ಆದಷ್ಟು ಬೇಗ ತನ್ನ ನಿರ್ಧಾರವನ್ನು ಬಹಿರಂಗಪಡಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕಾಂಗ್ರೆಸ್ ವರಿಷ್ಠರು ಈ ನಿರೀಕ್ಷೆಯನ್ನು ಹುಸಿಗೊಳಿಸಿದರು.

ತೆಲಂಗಾಣದ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಹೆಸರು ಬಹುತೇಕ ಅಂತಿಮಗೊಂಡಿದ್ದು, ಇಂದು ಸಂಜೆ 7 ಗಂಟೆಗೆ ರಾಜಭವನದಲ್ಲಿ ರಾಜ್ಯಪಾಲ ತಮಿಳಿಸೈ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ವರದಿಯಾಗಿತ್ತು. ಈ ಸುದ್ದಿಗೆ ಪುಷ್ಟಿ ನೀಡುವಂತೆ ಅಧಿಕಾರಿಗಳು ನೂತನ ಸಿಎಂಗಾಗಿ ರಾಜಭವನದಲ್ಲಿ ಬೆಂಗಾವಲು ಪಡೆಯನ್ನೂ ಸಿದ್ಧಪಡಿಸಿದ್ದರು.
ಇದರೊಂದಿಗೆ ಇಂದು ಸಿಎಂ ಅಭ್ಯರ್ಥಿ ಘೋಷಣೆಯಾಗಲಿದೆ ಎಂದು ಭಾವಿಸಲಾಗಿತ್ತು.

ಮತ್ತೊಂದೆಡೆ ಸೋನಿಯಾ ಗಾಂಧಿ ನಿವಾಸದಲ್ಲಿ ಸಂಸದೀಯ ಕಾರ್ಯತಂತ್ರ ಸಭೆ (Parliamentary strategy meeting)
ನಡೆದಿದೆ. ಈ ಸಭೆಯಲ್ಲಿ ತೆಲಂಗಾಣ ಸಿಎಂ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಭರವಸೆ ವ್ಯಕ್ತಪಡಿಸಿದರು. ಈಗಾಗಲೇ ಗೆದ್ದಿರುವ ಶಾಸಕರ ಅಭಿಪ್ರಾಯ ಸಂಗ್ರಹದ ವರದಿಯನ್ನು ಡಿ.ಕೆ.ಶಿವಕುಮಾರ್ ಅವರು ದೆಹಲಿ ನಾಯಕರಿಗೆ ಕಳುಹಿಸಿದ್ದಾರೆ. ದೆಹಲಿಯಿಂದ ಸಿಎಂ ಅಭ್ಯರ್ಥಿ ಯಾರೆಂದು ಯಾವಾಗ ಘೋಷಣೆಯಾಗಲಿದೆ ಎಂದು ಕಾತರದಿಂದ ಕಾಂಗ್ರೆಸ್ ನಾಯಕರು ಕಾದು ಕುಳಿತಿದ್ದಾರೆ.

ಆದರೆ ನಾಯಕರ ಆಸೆಗೆ ಕಾಂಗ್ರೆಸ್ ತಣ್ಣೀರೆರಚಿದೆ. ನಾಳೆಯವರೆಗೂ ಸಿಎಂ ಅಭ್ಯರ್ಥಿ ಘೋಷಣೆಯ ಸಸ್ಪೆನ್ಸ್ ಮುಂದುವರೆದಿದೆ. ಡಿಕೆ ಶಿವಕುಮಾರ್ ಜೊತೆಗೆ ನಾಲ್ವರು ವೀಕ್ಷಕರೊಂದಿಗೆ ದೆಹಲಿಗೆ ತೆರಳಿದ್ದಾರೆ. ನಾಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಿಎಂ ಅಭ್ಯರ್ಥಿ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ನಂತರ ತೆಲಂಗಾಣ ರಾಜ್ಯದ ನೂತನ ಸಿಎಂ ಅಧಿಕೃತವಾಗಿ ಘೋಷಣೆಯಾಗಲಿದೆ.  ಅದೇನೇ ಇರಲಿ ನಾಳೆ ಘೋಷಣೆಯಾದ ನಂತರವೂ ಪ್ರಮಾಣ ವಚನ ಯಾವಾಗ ನಡೆಯಲಿದೆ ಎಂಬುದು ತಿಳಿಯಬೇಕಿದೆ.

ಇಂದು ಸಂಜೆ ವೇಳೆಗೆ ಸಿಎಂ ಅಭ್ಯರ್ಥಿ ಘೋಷಣೆಯಾಗಲಿದೆ ಎಂಬ ಕುತೂಹಲ ಎಲ್ಲೆಡೆ ವ್ಯಕ್ತವಾಗಿತ್ತು, ಆದರೆ ಇದೀಗ ನಾಳೆಗೆ ಮುಂದೂಡಿಕೆ ಹಿಂದಿನ ಕಾರಣಗಳು ಚರ್ಚೆಗೆ ಗ್ರಾಸವಾಗಿವೆ. ಸಿಎಲ್‌ಪಿ ನಾಯಕನ ವಿಚಾರದಲ್ಲಿ ಶಾಸಕರ ಒಮ್ಮತದ ಕೊರತೆಯೇ ಅಥವಾ ನಾಯಕರು ಕಳುಹಿಸಿದ ಹೆಸರು ಸ್ವತಃ ನಾಯಕರಿಗೇ ಇಷ್ಟವಾಗುತ್ತಿಲ್ಲವೇ ಎಂಬ ಕುತೂಹಲದ ಚರ್ಚೆ ಈಗ ನಡೆಯುತ್ತಿದೆ. ತೆಲಂಗಾಣದ ನೂತನ ಸಿಎಂ ಯಾರು ಎಂದು ನಾಳೆಯಾದರೂ  ಘೋಷಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment