Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬೆಳಗಾವಿ ಅಧಿವೇಶನ: ಕೃಷಿ ಕಾಯ್ದೆ ಹಿಂಪಡೆಯುವ ಭರವಸೆ ನೀಡಿದ ಸಚಿವ ಮಹದೇವಪ್ಪ

---Advertisement---

ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದಲ್ಲಿ ಹಲವು ವಿಷಯಗಳು ಚರ್ಚೆಗೆ ಬರುತ್ತಿವೆ. ರೈತರು ಕೂಡ ಪ್ರತಿಭಟನೆ ನಡೆಸುತ್ತಿದ್ದರು. ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘಟನೆ ಸುವರ್ಣ ಸೌಧದ ಎದುರು ನಿನ್ನೆಯಿಂದ ಪ್ರತಿಭಟನೆ ಕೈಗೊಂಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ ಸಿ ಮಹದೇವಪ್ಪ ರೈತರಿಗೆ ಭರವಸೆ ನೀಡಿದ್ದಾರೆ.

 

ಈ ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ಕೃಷಿ ಕಾಯ್ದೆಯನ್ನು ಹಿಂಪಡೆಯಲಾಗುವುದು. ಆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು. ಹಾಲಿನ ದರ ಹೆಚ್ಚಳ, ಕೃಷಿ ಕಾಯ್ದೆ ವಾಪಸ್, ಕನಿಷ್ಠ ಬೆಂಬಲ ಬೆಲೆಯ ಶಾಸನ ಬದ್ಧ ಅನುಷ್ಠಾನ ಸೇರಿದಂತೆ ಹಲವು ಬೇಡಿಕೆಗಳನ್ನು ರೈತರು ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿಗೆ ಹೋದ ಮೇಲೆ ಇವುಗಳ ಬಗ್ಗೆ ವಿಧಾನಸೌಧದಲ್ಲಿ ಚರ್ಚೆ ನಡೆಸುತ್ತೇವೆ ಎಂದಿದ್ದಾರೆ.

 

ಕೇಂದ್ರದ ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕ ಬಳಿಕ ಮಹಾದಾಯಿ ಮತ್ತು ಮೇಕೆದಾಟು ಯೋಜನೆ ಆರಂಭಿಸಲು ಯಾವುದೇ ತಕರಾರು ಇರುವುದಿಲ್ಲ. ರೈತರ ಹಿತ ಕಾಪಾಡುವುದಕ್ಕೆ ಸರ್ಕಾರ ಯಾವಾಗಲೂ ಬದ್ಧವಾಗಿರುತ್ತದೆ ಎಂದು ಸಚಿವ ಮಹದೇವಪ್ಪ ಅವರು ರೈತರಿಗೆ ಭರವಸೆ ನೀಡಿದ್ದಾರೆ.

ಧರಣಿ ವೇಳೆ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ರೈತರಿಗೆ ಮಾರಕವಾದ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಆದರೆ ಈಗ ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ರೈತರ ಮನವಿಗೆ ಬೆಲೆ ಕೊಡಬೇಕು. ಇಲ್ಲದೆ ಹೋದರೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದು ಗ್ಯಾರಂಟಿ ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆಯನ್ನು ನೀಡಿದ್ದಾರೆ‌.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...