Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತೆಲಂಗಾಣದ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ :  ಡಿಸೆಂಬರ್ 7 ರಂದು ಪ್ರಮಾಣ ವಚನ

---Advertisement---

ಸುದ್ದಿಒನ್, ಹೈದರಾಬಾದ್, ಡಿಸೆಂಬರ್.05 : ತೆಲಂಗಾಣದಲ್ಲಿ ನೂತನ ಸಿಎಂ ಅಭ್ಯರ್ಥಿ ಘೋಷಣೆಗೆ ಕೊನೆಗೂ ತೆರೆ ಬಿದ್ದಿದೆ. ತೆಲಂಗಾಣ ನೂತನ ಸಿಎಂ ಆಗಿ ರೇವಂತ್ ರೆಡ್ಡಿಯನ್ನು ಕಾಂಗ್ರೆಸ್ ವರಿಷ್ಠರು ಅಧಿಕೃತವಾಗಿ ಘೋಷಿಸಿದ್ದಾರೆ. 

ಟಿಪಿಸಿಸಿ ಅಧ್ಯಕ್ಷರಾಗಿರುವ ರೇವಂತ್ ರೆಡ್ಡಿ ಅವರನ್ನು ಸಿಎಲ್ ಪಿ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕೆ.ಸಿ.ವೇಣುಗೋಪಾಲ್ ದೆಹಲಿಯಲ್ಲಿ ಮಾಧ್ಯಮಗಳ ಮುಂದೆ ಪ್ರಕಟಿಸಿದರು.

ಈ ಮೂಲಕ ನಿನ್ನೆಯಿಂದ ನಡೆಯುತ್ತಿದ್ದ ಸಸ್ಪೆನ್ಸ್ ಗೆ ಕಾಂಗ್ರೆಸ್ ವರಿಷ್ಠರು ತೆರೆ ಎಳೆದಿದ್ದಾರೆ.  ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿಯನ್ನು ಘೋಷಿಸಿದ ಹೈ ಕಮಾಂಡ್,  ಡಿಸೆಂಬರ್ 7 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದೆ.

ರೇವಂತ್ ರೆಡ್ಡಿ ಜತೆಗೆ ಇನ್ನೂ ಕೆಲವು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿಎಂ ಅಭ್ಯರ್ಥಿ ಘೋಷಣೆಗೂ ಮುನ್ನವೇ ದೆಹಲಿಯ ಕಾಂಗ್ರೆಸ್ ಕಚೇರಿಯಿಂದ ರೇವಂತ್ ರೆಡ್ಡಿಗೆ ಕರೆ ಬಂದಿದ್ದು, ದೆಹಲಿಗೆ ದೌಡಾಯಿಸಿದ್ದಾರೆ.

ತೆಲಂಗಾಣ ಸಿಎಂ ಎಂದು ಘೋಷಿಸಿದ ನಂತರ ರೇವಂತ್ ರೆಡ್ಡಿ ಟ್ವೀಟ್ ಮಾಡಿದ್ದಾರೆ. ತಮ್ಮನ್ನು ಸಿಎಲ್‌ಪಿ ನಾಯಕನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಪಕ್ಷದ ನಾಯಕರಿಗೆ ಧನ್ಯವಾದ ಅರ್ಪಿಸಿ ರೇವಂತ್ ಟ್ವೀಟ್ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಣಿಕರಾವ್ ಠಾಕ್ರೆ ಅವರಿಗೆ ರೇವಂತ್ ರೆಡ್ಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಬಂದಾಗಿನಿಂದ ಕಾಂಗ್ರೆಸ್ ಪಕ್ಷದಿಂದ ಸಿಎಂ ಅಭ್ಯರ್ಥಿ ಯಾರಾಗುತ್ತಾರೆ ಎಂಬ ತೀವ್ರ ಕಸರತ್ತು ನಡೆಯುತ್ತಲೇ ಇತ್ತು. ನಿನ್ನೆ ಗಾಂಧಿ ಭವನದಲ್ಲಿ ಸಿಎಲ್‌ಪಿ ಸಭೆ ನಡೆದಿತ್ತು. ಸಿಎಲ್‌ಪಿ ನಾಯಕರ ಆಯ್ಕೆ ವಿಚಾರವನ್ನು ಸಂಪೂರ್ಣವಾಗಿ  ವರಿಷ್ಠರಿಗೆ ವಹಿಸಿ ಎಐಸಿಸಿಗೆ ಕಳುಹಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದರು.

ರೇವಂತ್ ರೆಡ್ಡಿಗೆ ಸಿಎಂ ಆಗಲು ಶಾಸಕರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ನಾಯಕತ್ವವೂ ಒಲವು ತೋರಿದೆ. ಆದರೆ ಕೆಲ ಹಿರಿಯ ನಾಯಕರು ಒಪ್ಪಲಿಲ್ಲ. ಈ ಬಗ್ಗೆ ಒಂದಷ್ಟು ಕಸರತ್ತು ನಡೆದಿದೆ. ಇಂದು ಬೆಳಗ್ಗೆಯೂ ತೆಲಂಗಾಣ ಸಿಎಂ ಅಭ್ಯರ್ಥಿ ಘೋಷಣೆ ಕುರಿತು ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದರು.

ಇಂದು ಸಂಜೆಯೊಳಗೆ ತೆಲಂಗಾಣ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದರು. ಮತ್ತೊಂದೆಡೆ ಸಿಎಂ ರೇಸ್‌ನಲ್ಲಿರುವ ಟಿ.ಕಾಂಗ್ರೆಸ್‌ನ ಹಿರಿಯ ನಾಯಕರಾದ ಭಟ್ಟಿ ವಿಕ್ರಮಾರ್ಕ ಹಾಗೂ ಉತ್ತಮ್‌ಕುಮಾರ್‌ ರೆಡ್ಡಿ ದೆಹಲಿ ತಲುಪಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದರು.

ಇದೇ ವೇಳೆ ಉತ್ತಮ್ ಕುಮಾರ್ ರೆಡ್ಡಿ ಅವರು ಕರ್ನಾಟಕದ ಉಪ ಮುಖ್ಯಮಂತ್ರಿ ಹಾಗೂ ತೆಲಂಗಾಣ ವೀಕ್ಷಕ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ರಾಹುಲ್, ಕೆ.ಸಿ.ವೇಣುಗೋಪಾಲ್, ಡಿ.ಕೆ.ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ರೇವಂತ್ ರೆಡ್ಡಿ ಅವರನ್ನು ಸಿಎಂ ಎಂದು ಘೋಷಿಸುವ ಜತೆಗೆ ಮುಖ್ಯಮಂತ್ರಿ ಎಂದು ಘೋಷಣೆಯಾದರೆ ಉಳಿದ ವರಿಷ್ಠರು ಮುಖಂಡರ ಬೇಡಿಕೆಗಳ ಬಗ್ಗೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದರು.  ಪ್ರಮುಖರ ಸಭೆಯ ನಂತರ ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೆಸರನ್ನು ಅಂತಿಮಗೊಳಿಸಲಾಯಿತು.  ಈ ನಿರ್ಧಾರವನ್ನು ಕೆಸಿ ವೇಣುಗೋಪಾಲ್ ಪ್ರಕಟಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment