Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮನರಂಜನೆಗಾಗಿ ದೈವಗಳ ಬಳಕೆ ಮಾಡಿದರೆ ಅಟ್ರಾಸಿಟಿ ಕೇಸ್ ಎಚ್ಚರಿಕೆ..!

Facebook
Twitter
Telegram
WhatsApp

ಮಂಗಳೂರು: ತುಳುನಾಡಿನ ದೈವಗಳ ಬಗ್ಗೆ ಈಗೀಗ ಎಲ್ಲರಿಗೂ ತಿಳಿಯುತ್ತಿದೆ. ಆದರೆ ಕೆಲವರು ಭಕ್ತಿಯಿಂದ ಕೈಮುಗಿಯುತ್ತಾರೆ. ಇನ್ನು ಕೆಲವು ಕಡೆ ಆ ದೈವಗಳ ವೇಷವನ್ನು ಧರಿಸುತ್ತಾರೆ. ಈ ಸಂಬಂಧ ದೈವ ಪಾತ್ರಿ ದಯಾನಂದ ಕತ್ತಲ್ಸಾರ ಅಟ್ರಾಸಿಟಿ ಕೇಸ್ ದಾಖಲಿಸುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ದಯಾನಂದ ಕತ್ತಲ್ಸಾರ, ಮನರಂಜನೆಗಾಗಿ ದೈವಗಳ ಬಳಕೆ ಮಾಡಲಾಗುತ್ತಿದೆ. ಇದರಿಂದ ದೈವಗಳಿಗೆ ಅವಮಾನವಾದಂತೆ ಆಗುತ್ತಿದೆ. ತುಳುನಾಡಿನ ದೈವಗಳಂತೆ ವೇಷತೊಟ್ಟು ಅವಮಾನ ಮಾಡಲಾಗುತ್ತಿದೆ. ಹಣ ಸಂಪಾದನೆಗಾಗಿ ತುಳುನಾಡಿನ ದೈವಗಳ ವೇಷ ತೊಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಹಲವು ಕಡೆ ಈ ರೀತಿಯಾದಂತೆ ಬೆಳವಣಿಗೆ ನಡೆಯುತ್ತಿದೆ. ಕಾರ್ಯಕ್ರಮಗಳಲ್ಲಿ ತುಳುನಾಡಿನ ದೈವಗಳ ವೇಷ ಧರಿಸಿ, ಅಶ್ಲೀಲವಾಗಿ ನೃತ್ಯ ಮಾಡುತ್ತಾರೆ. ಭೂತ ಬಿಡಿಸಲು ತುಳುನಾಡಿನ ದೈವಗಳ ವೇಷ ತೊಟ್ಟು ನರ್ತನ ಮಾಡಲಾಗುತ್ತದೆ. ಕೆಲವು ಕಿಡಿಗೇಡಿಗಳು ಹಣಕ್ಕಾಗಿ ದೈವಗಳ ವೇಷ ತೊಡುತ್ತಿದ್ದಾರೆ.

ಈ ರೀತಿ ಮಾಡುತ್ತಿರುವುದರಿಂದ ಕೆಲವು ಸಮುದಾಯಗಳಿಗೆ ಅಪಮಾನವಾಗುತ್ತಿದೆ. ಪಂಬದ, ಪರವ, ನಲಿಕೆ ಸಮುದಾಯಗಳಿಗೆ ಅಪಮಾನವಾಗುತ್ತಿದೆ. ದೈವಗಳ ಅಪಪ್ರಚಾರದ ವಿರುದ್ಧ ರಿಷಭ್ ಶೆಟ್ಟಿ ಅವರು ಧ್ವನಿ ಎತ್ತಬೇಕು. ಕಿಡಿಗೇಡಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ. ದೈವಗಳಿಗೆ ಅಪಮಾನ ಮಾಡಿದರೆ ಅಂಥವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂತಾರಾ ಸಿನಿಮಾದಲ್ಲಿ ದೈವಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲಾಗಿತ್ತು. ಆದರೆ ಸಿನಿಮಾದಲ್ಲಿ ಓ ಎಂದು ಕೂಗುವ ಧ್ವನಿಯ ದೇವರ ಭಕ್ತಿಯ ಸಂಕೇತ. ಅದನ್ನ ಹೇಗಂದರೆ ಹಾಗೇ, ಎಲ್ಲೆಂದರಲ್ಲಿ ಕೂಗಬಾರದು ಎಂಬ ನಿಯಮವಿದೆ. ಆದರೆ ಸಿನಿಮಾ ನೋಡಿದ ಪ್ರತಿಯೊಬ್ಬರು ಥಿಯೇಟರ್ ನಲ್ಲಿಯೇ ಕೂಗುವುದಕ್ಕೆ ಶುರು ಮಾಡಿದ್ದರು. ಆಗ ರಿಷಬ್ ಶೆಟ್ಟಿ ಅವರು ಮನವಿಯನ್ನು ಮಾಡಿದ್ದರು‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!