Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭೂಮಿಗೆ ಭಾರವಾಗಿ ಬದುಕುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ : ಕಾಂಗ್ರೆಸ್ ವ್ಯಂಗ್ಯ

Facebook
Twitter
Telegram
WhatsApp

ಸಿಎಂ ಸಿದ್ದರಾಮಯ್ಯ ಅವರು ತನ್ವೀರ್ ಹಶ್ಮೀ ಜೊತೆಗೆ ವೇದಿಕೆ ಹಂಚಿಕೊಂಡಿದ್ದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗರಂ ಆಗಿದ್ದರು. ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ತಿರುಗೇಟು ನೀಡಿದೆ.

“ಆಚಾರವಿಲ್ಲದ ನಾಲಿಗೆ ನಿನ್ನ, ನೀಚ ಬುದ್ಧಿಯ ಬಿಡು ನಾಲಿಗೆ,
ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ, ಚಾಚಿ ಕೊಂಡಿರುವಂತ ನಾಲಿಗೆ“ ದಾಸರ ಈ ಸಾಲುಗಳು ಬಿಜೆಪಿಯಲ್ಲಿ ಮನ್ನಣೆ ಸಿಗದೆ ಮತಿಭ್ರಮಣೆಗೊಂಡವರಂತೆ ವರ್ತಿಸುತ್ತಾ, ಭೂಮಿಗೆ ಭಾರವಾಗಿ ಬದುಕುತ್ತಿರುವ @BasanagoudaBJP ಅವರಿಗೆ ಅರ್ಪಣೆ.

ಮುಸ್ಲಿಂ ಧರ್ಮಗುರು ಸೈಯ್ಯದ್ ತನ್ವೀರ್ ಹಾಶ್ಮಿಯವರಿಗೆ ಐಸಿಸ್ ನಂಟಿದೆ ಎಂದು ಹುರುಳಿಲ್ಲದ ಆರೋಪ ಮಾಡಿದ ಅತೃಪ್ತ ಆತ್ಮ ದಂತಿರುವ ಯತ್ನಾಳ್ ಹಾಗೂ ಬಿಜೆಪಿ ಹಾಶ್ಮಿಯವರ ಸಾಮಾಜಿಕ ಜಾಲತಾಣಗಳಲ್ಲಿದ್ದ ಫೋಟೋಗಳನ್ನು ಎತ್ತಿ ಇತರ ಮುಸ್ಲಿಂ ಧಾರ್ಮಿಕ ನಾಯಕರನ್ನು ಐಸಿಸ್ ನವರೆಂದು ಬಿಂಬಿಸಲು ಹೊರಟಿದ್ದಾರೆ,

ಯತ್ನಾಳ್ ಅವರೇ, ಇದೇ ಹಾಶ್ಮಿಯಾವರೊಂದಿಗೆ ನಿಮ್ಮ ಹೊಸ ಬ್ರದರ್ ಕೂಡ ಜಾತ್ಯತೀತತೆಯ ಪೋಷಕು ತೊಟ್ಟಿದ್ದಾಗ ಫೋಟೋ ತೆಗೆದುಕೊಂಡಿದ್ದಾರೆ, ಈಗ ಕುಮಾರಸ್ವಾಮಿಯವರಿಗೂ ಐಸಿಸ್ ಪಟ್ಟ ಕಟ್ಟುತ್ತೀರಾ?

ಮತಿಭ್ರಮಣೆಯಾದವರ ಮಾತುಗಳನ್ನು ಕೇಳಿಕೊಂಡು ತನಿಖೆ ಮಾಡಿಸಿ ಸರ್ಕಾರದ ಸಂಪನ್ಮೂಲ, ಅಧಿಕಾರಿಗಳ ಸಮಯವನ್ನು ವ್ಯರ್ಥ ಮಾಡಲಾದೀತೆ!? ಮುಂದೆ ನಮ್ಮ ಮನೆಯ ಬಿಳಿ ನಾಯಿ ಕಪ್ಪು ಮರಿ ಹಾಕಿದೆ ತನಿಖೆ ಮಾಡಿಸಿ ಎನ್ನುವಿರಿ, ಮಾಡಿಸಲು ಸಾಧ್ಯವೇ! ಮತಿಭ್ರಮಣೆಯಾಗಿರುವ @BasanagoudaBJP ಹಾಗೂ ಬಿಜೆಪಿ ನಾಯಕರ ಗಮನಕ್ಕೆ..

ಬಿಜೆಪಿ ಐಸಿಸ್ ನಂಟು ಕಲ್ಪಿಸಿದ ಮುಸ್ಲಿಂ ಧಾರ್ಮಿಕ ಗುರುಗಳು ಕೇಂದ್ರ ಸಚಿವ @nitin_gadkari ಅವರೊಂದಿಗೂ ಕಾಣಿಸಿಕೊಂಡಿದ್ದಾರೆ, ಈಗ ನಿತಿನ್ ಗಡ್ಕರಿಯವರನ್ನೂ ತನಿಖೆಗೆ ಒಳಪಡಿಸಲು ಬಿಜೆಪಿಗರು ಆಗ್ರಹಿಸುತ್ತಾರಾ? ಸುಳ್ಳು ಆರೋಪ ಮಾಡುವ ಯತ್ನಾಳ್ ಈಗ ಯಾವ ರೀತಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತಾರೆ? ಎಂದು ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!