Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪ್ರಕೃತಿ ಶಾಲೆಯಲ್ಲಿ 2024ರ ನೂತನ ವರ್ಷದ ಕ್ಯಾಲೆಂಡರ್‌ ಬಿಡುಗಡೆ

---Advertisement---

ಸುದ್ದಿಒನ್, ಚಿತ್ರದುರ್ಗ : ನಗರದ ಪ್ರಕೃತಿ ಶಾಲೆಯಲ್ಲಿ ಬಿ.ಇ.ಒ. ನಾಗಭೂಷಣ್‌ರವರು ವಿನೂತನ ಶೈಲಿಯ 2024ರ ನೂತನ ವರ್ಷದ ಕ್ಯಾಲೆಂಡರ್‌ನ್ನು ಬಿಡುಗಡೆ ಮಾಡಿ, ಕಲಿಸುವುದೇ ಶಿಕ್ಷಣದ ಉದ್ದೇಶವಾಗಬೇಕು ಮತ್ತು  ಗುರುಕುಲ ಶಿಕ್ಷಣ ಹಾಗೂ ಇಂದಿನ ಶಾಲಾ ಶಿಕ್ಷಣದ ಬಗ್ಗೆ ವ್ಯತ್ಯಾಸ ತಿಳಿಸಿದರು.

ಶಿಕ್ಷಣ ಸಂಯೋಜಕ ಎಂ.ಆರ್ ನಾಗರಾಜ್,
ಉತ್ತರ ವಲಯದ ಸಿ.ಆರ್.ಪಿಗಳಾದ  ರವಿಶಂಕರ್‌ರವರು ಹಾಗೂ ವಿಷನ್ ಅಕಾಡಮಿಯ ಮುಖ್ಯಸ್ಥ ಲೊಕೇಶ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಕಾರ್ತಿಕ್ ಅವರು ಮಾತನಾಡಿ, ಮಕ್ಕಳಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿ ಹಾಗೂ ಮಾನವೀಯ ಮೌಲ್ಯಗಳನ್ನು ಕಲಿಸುವುದೇ ಶಿಕ್ಷಣದ ಉದ್ದೇಶವಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟೆರಿಯನ್ ಪಿ.ಎಚ್.ಎಫ್ ಎಂ.ಕೆ ರವೀಂದ್ರ ವಹಿಸಿಕೊಂಡಿದ್ದರು. ಖಜಾಂಚಿ ಶ್ರೀಮತಿ ಶ್ವೇತ ಕಾರ್ತಿಕ್  ರವರು ಉಪಸ್ಥಿತರಿದ್ದರು.

ಈ ವೇಳೆ ಮುಖ್ಯ ಅತಿಥಿಗಳನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಸಹ ಶಿಕ್ಷಕ ಮಾಮಾ ಜಿಗಣಿರವರು ಎಲ್ಲರನ್ನು ಸ್ವಾಗತಿಸಿದರು. ವಂದನಾರ್ಪಣೆಯನ್ನು ಮುಖ್ಯ ಶಿಕ್ಷಕಿ ಶಶಿಕಲಾ ರವರು ನೆರವೇರಿಸಿದರು. ನಿರೂಪಣೆಯನ್ನು ಸಹ ಶಿಕ್ಷಕಿಯರಾದ ಮಾನಸ ಹಾಗೂ ರಮ್ಯಾರವರು ನಡೆಸಿಕೊಟ್ಟರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...