Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಟಿ ರವಿ ನೀಡಿದ ಅಂಡಮಾನ್ ಜೈಲು ಭೇಟಿ ಆಫರ್ ಬಗ್ಗೆ ಪ್ರಿಯಾಂಕ್ ಖರ್ಗೆ ಏನಂದ್ರು..?

Facebook
Twitter
Telegram
WhatsApp

ಆತ್ಮೀಯರಾದ ಪ್ರಿಯಾಂಕ್‌ ಖರ್ಗೆ ಅವರೇ, ತಾಯಿ ಭಾರತಿಯ ಮಡಿಲಿನಲ್ಲಿ ಜನಿಸಿದ ಮಹಾನ್ ರಾಷ್ಟ್ರೀಯವಾದಿ, ಕರಿನೀರ ವೀರ, ಹುತಾತ್ಮ ವೀರ್ ಸಾವರ್ಕರ್ ಅವರು, ಬ್ರಿಟಿಷರಿಂದ ಕಠಿಣ ಕಾರಾಗ್ರಹ ಶಿಕ್ಷೆಗೊಳಪಡಿಸುವ ತೀರ್ಪಿನಂತೆ, ಘೋರ ಕರಿನೀರಿನ ಶಿಕ್ಷೆ ಅನುಭವಿಸಿದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇರುವ ಸೆಲ್ಯುಲರ್ ಜೈಲಿಗೆ ಭೇಟಿ ನೀಡಲು ನಿಮ್ಮನ್ನು ಆಹ್ವಾನಿಸುತ್ತೇನೆ. ಅಂದ ಹಾಗೆ ನಿಮ್ಮ ಪ್ರವಾಸದ ಸಂಪೂರ್ಣ ಖರ್ಚುವೆಚ್ಚ ನಾನೇ ಭರಿಸುತ್ತೇನೆ ಎಂದಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಟಿ ರವಿ ಅವರ ಸವಾಲನ್ನು ಸ್ವೀಕರಿಸಿದ್ದಾರೆ.

ಸಿ ಟಿ ರವಿ ಅವರು ಫಂಡ್ ಮಾಡುವುದರಿಂದ ನಾನು ಹೋಗಿ ಸಾವರ್ಕರ್ ಇದ್ದ ಜೈಲಿಗೆ ಹೋಗಿ ನೋಡಿಕೊಂಡು ಬರುತ್ತೀನಿ. ಆದರೆ ಈಗ ರಾಜ್ಯದಲ್ಲಿ ಬರದ ಪರಿಸ್ಥಿತಿ ಇದೆ. ಬರ ಪ್ರವಾಸದಲ್ಲಿ ಇದ್ದೇನೆ. ಬರ ಪ್ರವಾಸ ಮುಗಿದ ಮೇಲೆ ಹೋಗಿ ಬರುತ್ತೇನೆ. ಅಲ್ಲಿಯವರೆಗೂ ಆ ಆಫರ್ ಇರುತ್ತದೆಯಾ..? ನನ್ನ ಸಿದ್ದಾಂತ ನನಗೆ ಕ್ಲಿಯರ್ ಇದೆ. ಬಸವ ತತ್ವ, ಅಂಬೇಡ್ಕರ್ ತತ್ವ ಸಿದ್ದಾಂತ ನನ್ನದು.

ಬಿಜೆಪಿಗೆ ಮೂರು – ನಾಲ್ಕು ಪ್ರಶ್ನೆಗಳನ್ನು ಕೇಳುತ್ತೇನೆ.

* ಸಾವರ್ಕರ್ ಬ್ರಿಟಿಷರ ಪಿಂಚಣಿಗೆ ಅರ್ಜಿ ಹಾಕಿರಲಿಲ್ಲವಾ..?

* ವೀರ ಅಂತ ಬಿರುದು ಸಾವರ್ಕರ್ ಗೆ ಕೊಟ್ಟವರು ಯಾರು..?

* ದೇಶ ವಿಭಜನೆ ಮಾಡುವುದಕ್ಕೆ ಮೊದಲು ಪ್ರಸ್ತಾಪ ಮಾಡಿದ್ದು ಯಾರು..? ಎಂದು ಪ್ರಶ್ನೆ ಕೇಳಿದ್ದಾರೆ.

ವಿಧಾನಸಭೆಯಲ್ಲಿ ಹಾಕಿರುವ ಸಾವರ್ಕರ್ ಫೋಟೋವನ್ನು ತೆಗೆಯಲು ಅವಕಾಶ ಸಿಕ್ಕರೆ ನಾನು ಈಗಲೇ ತೆಗೆಯುತ್ತೇನೆ ಎಂದಿದ್ದರು. ಈ ಹೇಳಿಕೆಗೆ ಸಿಟಿ ರವಿ ಆಕ್ರೋಶ ಹೊರ ಹಾಕಿ, ಅಂಡಮಾನ್ ಜೈಲಿನ ಆಫರ್ ನೀಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!