Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಸ್ಪೃಶ್ಯತೆಯ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು : ಮುಖ್ಯಮಂತ್ರಿ ಚಂದ್ರು

Facebook
Twitter
Telegram
WhatsApp

 

ಹುಬ್ಬಳ್ಳಿ: ಅಸ್ಪೃಶ್ಯತೆಯ ಬಗ್ಗೆ ಇತ್ತಿಚೆಗಷ್ಟೇ ಗೂಳಿಹಟ್ಟಿ ಶೇಖರ್ ಮಾತನಾಡಿದ್ದರು. ಜಾತಿ ರಾಜಕಾರಣಕ್ಕೆ ನಾಗ್ಪುರದ ಹೆಡಗೇವಾರ್ ಸ್ಮಾರಕದೊಳಗೆ ನನ್ನನ್ನು ಬಿಡಲು ಅನುಮತಿ ನಿರಾಕರಿಸಿದ್ದರು ಎಂದು ಗೂಳಿಹಟ್ಟಿ ಶೇಖರ್ ಹೇಳಿದ್ದರು. ಇದೀಗ ಆ ಮಾತಿಗೆ ಮುಖ್ಯಮಂತ್ರಿ ಚಂದ್ರು ಕೂಡ ಧ್ವನಿಗೂಡೊಸಿದ್ದು, ನನಗೂ ಬಿಜೆಪಿಯಲ್ಲಿದ್ದಾಗ ಅಸ್ಪೃಶ್ಯತೆಯ ಅನುಭವ ಆಗಿದೆ ಎಂದಿದ್ದಾರೆ.

 

ಹುಬ್ಬಳ್ಳಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಆದ ಅನುಭವ, ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು. ನಾನೂ ಕೂಡ ಬಿಜೆಪಿಯಲ್ಲಿ ಇದ್ದು, ಬಂದವ. ಕೆಲವೊಂದು ಕಡೆ ನಮಗೆ ಆಹ್ವಾನವೂ ಇರುತ್ತಿರಲಿಲ್ಲ. ಕೆಲವೊಂದು ಕಡೆ ನಮ್ಮನ್ನು ವಿಶ್ವಾಸಕ್ಕೂ ತೆಗೆದುಕೊಳ್ಳುತ್ತಿರಲಿಲ್ಲ. ಗೂಳಿಹಟ್ಟಿ ಶೇಖರ್ ಹೇಳಿದ ಮೇಲೆ, ಅದು ನನಗೂ ಮನವರಿಕೆ ಆಗುತ್ತಿದೆ ಎಂದು ಬಿಜೆಪಿಯಲ್ಲಿರುವ ಜಾತಿಯ ಬಗ್ಗೆ ಮುಖ್ಯಮಂತ್ರಿ ಚಂದ್ರು ಮಾತನಾಡಿದ್ದಾರೆ.

ಬಿಜೆಪಿಯ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಇತ್ತಿಚೆಗೆ ಪಕ್ಷದ ಆರ್ ಎಸ್ ಎಸ್ ಬಗ್ಗೆ ಮಾತನಾಡಿದ್ದರು. ರಾಜ್ಯ ವಿಧಾನಸಭಾ ಚುನಾವಣೆ ನಾಲ್ಕು ತಿಂಗಳು ಇರುವ ಮುಂಚೆ, ನಾಗ್ಪುರದ ಆರ್ ಎಸ್ ಎಸ್ ಕಚೇರಿಯಲ್ಲಿರುವ ಹೇಡಗೇವಾರ್ ಸ್ಮಾರಕದ ಒಳಗೆ, ಜಾತಿಕಾರಣಕ್ಕೆ ಪ್ರವೇಶ ನಿರಾಕರಿಸಲಾಗಿತ್ತು ಎಂದು ಆರೋಪಿಸಿದ್ದರು. ಇದೀಗ ಜಾತಿ ವಿಚಾರ ಬಿಜೆಒಇಯಲ್ಲಿ ಇರುವುದು ನಿಜ ಎಂಬಂತೆ ಮುಖ್ಯಮಂತ್ರಿ ಚಂದ್ರು ತಮ್ಮ ಅನುಭವವನ್ನು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!