Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಟ ಶಿವರಾಜ್ಕುಮಾರ್ ಅವರಿಗೆ ಬಿಗ್ ಆಫರ್ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

---Advertisement---

ಬೆಂಗಳೂರು : ಇಂದು ಈಡಿಗ ಸಮುದಾಯದ ಸಮಾವೇಶ ನಡೆಯುತ್ತಿದೆ. ಈ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಧು ಬಂಗಾರಪ್ಪ ಸೇರಿದಂತೆ ಹಲವರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಇದೇ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವಣ್ಣನಿಗೆ ಒಂದು ಆಫರ್ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಡಿಕೆ ಶಿವಕುಮಾರ್ ಕೇಳಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ‘ನೀನೂ ರೆಡಿಯಾಗಪ್ಪ, ಪಾರ್ಲಿಮೆಂಟ್ ನಿಂತುಕೊಳ್ಳುವುದಕ್ಕೆ, ನಿಂಗೆ ಬೇಕಾದ ಕಡೆಯಲ್ಲಿ ಟಿಕೆಟ್ ಕೊಡುತ್ತೇವೆ ಎಂದಿದ್ದೆ. ಇಲ್ಲ ಒಂದು ಐದು ಸಿನಿಮಾಗಳನ್ನು ಒಪ್ಪಿಕೊಂಡು ಬಿಟ್ಟಿದ್ದೀನಿ ಅಂದ್ರು. ನಾನು ಹೇಳಿದೆ ಸಿನಿಮಾಗಳು ಯಾವಾಗ ಬೇಕಾದರೂ ಮಾಡಬಹುದು. ಸಂಸತ್ ಗೆ ಹೋಗಲು ಯಾರಿಗೂ ಯೋಗ ಬರುವುದಿಲ್ಲ. ಆ ಯೋಗ ಮನೆ ಬಾಗಿಲಿಗೆ ಬಂದಿದೆ. ಅದನ್ನು ತಪ್ಪಿಸಿಕೊಳ್ಳುವುದಕ್ಕೆ ಹೋಗಬೇಡಿ ಎಂದೆ. ನಮ್ಮ ಸರ್ಕಾರ ನಿಮ್ಮ ಬೆನ್ನಿಗೆ ಇದೆ. ನಿಮ್ಮ ಸಹಾಯ ಪಕ್ಷಕ್ಕೆ ಇರಬೇಕು ಎಂದಿದ್ದಾರೆ’ ಎಂದಿದ್ದಾರೆ.

ಶಿವಣ್ಣ ರಾಜಕೀಯದಲ್ಲಿ ನೇರವಾಗಿ ನಿಲ್ಲದೆ ಇದ್ದರು, ಪತ್ನಿ ಹಾಗೂ ಭಾಮೈದನ ಪರವಾಗಿ ಸಾಕಷ್ಟು ಪ್ರಚಾರ ನಡೆಸಿದ್ದಾರೆ. ಗೀತಾ ಸ್ಪರ್ಧೆ ಮಾಡಿದ್ದಾಗಲೂ ಅವರ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಮಧು ಬಂಗಾರಪ್ಪ ಅವರ ಪರವಾಗಿಯೂ ಪ್ರಚಾರದಲ್ಲಿ ತೊಡಗಿದ್ದರು. ಇದೀಗ ನೇರವಾಗಿ ಶಿವಣ್ಣ ಅವರಿಗೇನೆ ಆಫರ್ ನೀಡಲಾಗಿದೆ. ಸಿನಿಮಾಗಳಲ್ಲಿ ಬ್ಯುಸಿ ಇರುವ ಶಿವಣ್ಣ, ರಾಜಕೀಯಕ್ಕೆ ಬರುತ್ತಾರಾ ಎಂಬ ಕುತೂಹಲ ಸಹಜವಾಗಿಯೇ ಎಲ್ಲರಲ್ಲೂ ಕಾಡುತ್ತಿದೆ. ಆಫರ್ ಗಳು ಇದೇ ಮೊದಲೇನು ಅಲ್ಲದೆ ಹೋದರು ಶಿವಣ್ಣ ಈ ಬಾರಿ ಯಾವ ನಿರ್ಧಾರ ಮಾಡ್ತಾರೆ ಎಂಬ ಪ್ರಶ್ನೆ ಇದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...