Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಪತನ : ಕುಮಾರಸ್ವಾಮಿ ಹೇಳಿಕೆಗೆ ಸಚಿವ ಹೆಚ್ ಕೆ ಪಾಟೀಲ್ ಏನಂದ್ರು..?

Facebook
Twitter
Telegram
WhatsApp

ಮೈಸೂರು: ಲೋಕಸಭಾ ಚುನಾವಣೆಯ ಬಳಿಕ ರಾಜಕೀಯದಲ್ಲಿ ಬದಲಾವಣೆಗಳು ಆಗಲಿವೆ ಎಂದು ಬಿಜೆಪಿ ನಾಯಕರು, ದಳಪತಿಗಳು ಆಗಾಗ ಹೇಳುತ್ತಲೆ ಇದ್ದಾರೆ. ಲೋಕಸಭೆಯ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ನುಡಿದಿದ್ದರು. ಈ ಸಂಬಂಧ ಸಷಿವ ಹೆಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡುವ ಮೂಲಕ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನಾವೂ ಗಟ್ಟಿಯಾಗಿದ್ದೇವೆ. ಹೀಗಾಗಿ ನಮ್ಮ ಸರ್ಕಾರ ಪತನವಾಗುವುದಿಲ್ಲ. ಹೆಚ್ ಡಿ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿಯಾಗಿದ್ದವರು. ಈಗ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ವೇಳೆ ಹೇಳಿಕೆಗಳನ್ನು ನೀಡುವ ಮೂಲಕ, ಸರ್ಕಾರವನ್ನು ಅಲುಗಾಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ‌.

ಸಚಿವ ಸ್ಥಾನ ಸಿಗದ ಕಾರಣ ತಮ್ಮದೇ ಪಕ್ಷದ ವಿರುದ್ಧ ಬಿಕೆ ಹರಿಪ್ರಸಾದ್ ಹರಿಹಾಯುತ್ತಿದ್ದಾರೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಬಿಕೆ ಹರಿಪ್ರಸಾದ್ ಅವರು ಪಕ್ಷದ ವಿರುದ್ಧವಾಗಿ ಮಾತನಾಡುತ್ತಿರುವ ಬಗ್ಗೆ ಮಾತನಾಡಿದ ಹೆಚ್ ಕೆ ಪಾಟೀಲ್ ಅವರು, ಎಂಎಲ್ಸಿ ಹರಿಪ್ರಸಾದ್ ನೀಡಿದ ಹೇಳಿಕೆಯನ್ನು ನಾನು ನೋಡಿಲ್ಲ. ಕೆಲವೊಮ್ಮೆ ಮಾಧ್ಯಮಗಳೇ ಇಂತಹ ವಿಚಾರಗಳನ್ನು ಪ್ರಸ್ತಾಪ ಮಾಡುತ್ತವೆ. ಇದು ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದಿದ್ದಾರೆ.

ಇನ್ನು ಮೈಸೂರಿನ ಬಗ್ಗೆ ಮಾತನಾಡಿ, ಸಾಂಸ್ಕೃತಿಕ ನಗರಿ ಮೈಸೂರು, ಪ್ರವಾಸಿತಾಣಕ್ಕೆ ಹೆಸರುವಾಸಿಯಾಗಿದೆ. ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಮೈಸೂರು ಕೆಲಸ ಮಾಡಿದೆ. ಮೈಸೂರು ಬ್ರಾಂಡ್ ಲೋಗೋ ಸಹ ಅನಾವರಣ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವ ತನಕ ಸಿಎಂ, ಡಿಸಿಎಂ, ಗೃಹ ಸಚಿವರು ಕತ್ತೆ ಕಾಯ್ತಾ ಇದ್ರಾ..? ಪ್ರಹ್ಲಾದ್ ಜೋಶಿ ಪ್ರಶ್ನೆ…!

    ಕಲಬುರಗಿ: ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪಾಸ್ ಪೋರ್ಟ್ ರದ್ದು ಪಡಿಸಿದರೆ ಅವೆಉ ದೇಶಕ್ಕೆ ವಾಪಾಸ್

ಸೈಕ್ಲೋನ್ ಎಫೆಕ್ಟ್: ರಾಜ್ಯಾದ್ಯಂತ 5 ದಿನಗಳ ಕಾಲ ಮಳೆ..!

  ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಮಳೆಯ ಅಬ್ಬರ ಶುರುವಾಗಿದೆ. ಆರಂಭದಲ್ಲಿಯೇ ಉತ್ತಮ ಮಳೆಯಾಗುವ ಭರವಸೆ ನೀಡಿದೆ. ಇದೀಗ ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತವಾಗಿದ್ದು, ಮುಂದಿನ ಐದು ದಿನದಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಮಾನ

ಪಿಂಕ್ ಐ |  ಕಣ್ಣುಗಳ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಗೊತ್ತಾ ?

ಸುದ್ದಿಒನ್ : ಸರ್ವೇಂದ್ರಿಯಾನಂ ನಯನಂ ಪ್ರದಾನಂ ಎನ್ನುತ್ತಾರೆ. ನಮ್ಮ ಪೂರ್ವಜರು ಕಣ್ಣಿಗೆ ಅಷ್ಟೊಂದು ಪ್ರಾಮುಖ್ಯತೆ ನೀಡಿದ್ದರು. ಆದರೆ ಇಂದಿನ ದಿನಗಳಲ್ಲಿ  ಅಂತಹ ಕಣ್ಣುಗಳತ್ತ ಗಮನ ಹರಿಸದೆ ಸಮಸ್ಯೆ ತಂದುಕೊಳ್ಳುತ್ತಿದ್ದಾರೆ. ವಿಶೇಷವಾಗಿ ಮೇಕಪ್ ವಿಷಯದಲ್ಲಿ ಮಹಿಳೆಯರು

error: Content is protected !!