ಬೆಳಗಾವಿ: ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಜನರ ತೆರಿಗೆ ಹಣದಿಂದ ಮೌಲ್ವಿಗಳಿಗೆ ಹಣ ನೀಡಲಾಗುತ್ತಿದೆ. ಅದಕ್ಕೆ ತೆರಿಗೆ ಹೆಚ್ಚಳ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸುವರ್ಣಸೌಧದಲ್ಲಿ ಮಾತನಾಡಿದ ಆರ್ ಅಶೋಕ್, ಎಲ್ಲದಕ್ಕೂ ತೆರಿಗೆ ಹೇರುವ ಸರ್ಕಾರವಿದು. ಸ್ಟಾಂಪ್ ಡ್ಯೂಟಿ ಹೆಚ್ಚಳ ಮಾಡಿ, ಜನರಿಗೆ ಹೆಚ್ಚಿನ ಹೊರೆ ಆಗಿದೆ. ರೈತರ ಸಮಸ್ಯೆ ಬಗ್ಗೆ ಇವರಿಗೆ ಗಮನವಿಲ್ಲ. ರೈತರಿಗೆ 25 ಸಾವಿರ ಕೊಡಿ ಎಂದು ಆಗ್ರಹಿಸಿದ್ದೇವೆ. ಬೆಳಗಾವಿ ಅಧಿವೇಶನವನ್ನು ಇನ್ನೂ ನಾಲ್ಕು ದಿನ ಮುಂದುವರೆಸಲು ಕೋರಿದ್ದೇವೆ. ಸರ್ಕಾರ ಅದ್ಯಾವುದಕ್ಕೂ ಸ್ಪಂದನೆ ತೋರುತ್ತಿಲ್ಲ. ತೆರಿಗೆ ಹೆಚ್ಚಳ ಮಾಡಿರುವುದು, ಮೌಲ್ವಿಗಳಿಗೆ ಹಣ ನೀಡಿರುವುದಕ್ಕೆ. ಈ ಸರ್ಕಾರ ಬೇಜವಬ್ದಾರಿ ಸರ್ಕಾರ.

ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿರುವ ಬಗ್ಗೆ ಬುಧವಾರ ಪ್ರತಿಭಟನೆ ನಡೆಸುತ್ತೇವೆ. ರಾಜ್ಯಕ್ಕಿಂತಲೂ ತೆಲಂಗಾಣದ ಮೇಲೆ ಈ ರಾಜ್ಯಕ್ಕೆ ಆಸಕ್ತಿ ಜಾಸ್ತಿ. ಇದು ದಿವಾಳಿಯಾಗಿರುವ ಸರ್ಕಾರ. ಉತ್ತರ ಕರ್ನಾಟಕ ಭಾಗದ ಜನರ ಹಿತವನ್ನು ಈ ಸರ್ಕಾರ ಕಡೆಗಣಿಸಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















