Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್. ಅಶೋಕ್ ನಾಮಫಲಕ ತೆಗೆದರೆ ಆ ಕೊಠಡಿಗೆ ಕಾಲಿಡುತ್ತೇನೆ : ಬಿಜೆಪಿ ಶಾಸಕ ವಿಶ್ವನಾಥ್

Facebook
Twitter
Telegram
WhatsApp

 

 

ಬೆಳಗಾವಿ: ಆರ್ ಅಶೋಕ್ ಅವರ ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿಯಲ್ಲಿಯೇ ವಿರೋಧವಿತ್ತು. ಆದರೆ ಮುಂದಿನ ಲೋಕಸಭಾ ಚುನಾವಣೆಯ ಸ್ಟಾಟರ್ಜಿ ಬಿಜೆಪಿಯಲ್ಲಿ ಬೇರೆಯದ್ದೇ ಆಗಿತ್ತು. ಹೀಗಾಗಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಗೆ ಸಮಯ ತೆಗೆದುಕೊಂಡೇ ಆಯ್ಕೆ ಮಾಡಲಾಗಿತ್ತು. ಈ ನಡುವೆ ವಿಪಕ್ಷ ನಾಯಕ ಆರ್ ಅಶೋಕ್ ಇದ್ದರೆ ನಾನು ಆ ಕೊಠಡಿಗೆ ಹೆಜ್ಜೆ ಇಡುವುದಿಲ್ಲ ಎಂದು ಬಿಜೆಪಿ ಶಾಸಕ ವಿಶ್ವನಾಥ್ ಹೇಳಿದ್ದಾರೆ. ಈ ಮೂಲಕ ಮನಸ್ತಾಪಗಳು ಇನ್ನು ಮುಂದುವರೆದಂತೆ ಕಾಣುತ್ತಿದೆ.

ಸದನದಲ್ಲಿ ಚರ್ಚೆ ಮಾಡಬೇಕಾದ ವಿಚಾರಗಳ ಕುರಿತು ಬಿಜೆಪಿ ನಾಯಕರು ಕ್ಲೋಸ್ಡ್ ಡೋರ್ ಮೀಟಿಂಗ್ ಅನ್ನು ಅರೆಂಜ್ ಮಾಡಿದ್ದರು. ಅದು ಪ್ರತಿಪಕ್ಷ ನಾಯಕನ ಕೊಠಡಿಯಲ್ಲಿಯೇ ಆಗಿತ್ತು‌. ಈ ವೇಳೆ ಶಾಸಕ ಮುನಿರತ್ನ ಅವರು, ಯಲಹಂಕ ಶಾಸಕ ವಿಶ್ವನಾಥ್ ಅವರ ಕೈಹಿಡಿದು ಕರೆದುಕೊಂಡು ಹೋಗುತ್ತಿದ್ದರು. ಆರ್. ಅಶೋಕ್ ಅವರ ಕೊಠಡಿ ಬರುತ್ತಿದ್ದಂತೆ ಒಳಗೆ ಬರಲು ನಿರಾಕರಣೆ ಮಾಡಿದರು.

‘ಅಶೋಕ್ ಹೆಸರಿನ ನಾಮಫಲಕ ಇರುವ ತನಕ ಆ ಕೊಠಡಿಗೆ ನಾನು ಕಾಲು ಇಡುವುದಿಲ್ಲ. ಬೇಕಾದರೆ ಆ ಬೋರ್ಡ್ ತೆಗೆಯಲಿ, ನಂತರದಲ್ಲಿ ನಾನು ಹೋಗುತ್ತೇನೆ’ ಎಂದು ಕಡ್ಡಿ ತುಂಡಾಗುವಂತೆ ಹೇಳಿದರು. ಇದೇ ವೇಳೆ ಬಿವೈ ವಿಜಯೇಂದ್ರ ಅವರ ಬಳಿಯೂ ಚರ್ಚೆ ನಡೆಸಿದ್ದಾರೆ. ಇಬ್ಬರು ಕುಳಿತು ಮಾತುಕತೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!