Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಸ್ರೇಲ್-ಹಮಾಸ್ ನಡುವೆ ಯುದ್ಧ ನಿಲ್ಲಲಿ ಶಾಂತಿ ನೆಲಸಲಿ : ಚಿತ್ರದುರ್ಗದಲ್ಲಿ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಪ್ರಾರ್ಥನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.12 : : ಇಸ್ರೇಲ್-ಹಮಾಸ್ ನಡುವೆ ನಡೆಯುತ್ತಿರುವ ಯುದ್ದ ಕೊನೆಗೊಂಡು ಶಾಂತಿ ನೆಲೆಸಲಿ ಎಂದು ಯುನೈಟೆಡ್ ಕ್ರಿಶ್ಚಿಯನ್ ಫೋರಂ ಯೂಮನ್ ರೈಟ್ಸ್‌ ನಿಂದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪ್ರಾರ್ಥನೆ ಸಲ್ಲಿಸಲಾಯಿತು.

ಯುದ್ದದಿಂದ ಮಹಿಳೆಯರ ಮಾನಭಂಗ, ಪುಟ್ಟ ಮಕ್ಕಳ ಹತ್ಯೆ ಕ್ಷಮಿಸಲಾಗದು. ದಯಾಮಯನಾದ ಏಸು ಅಲ್ಲಿನ ಉಗ್ರರ ಮನಸ್ಸು ಪರಿವರ್ತನೆಗೊಳಿಸಲಿ. ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ಅಮಾಯಕರು, ಮುಗ್ದರು, ಶೋಷಣೆಗೊಳಗಾಗುತ್ತಿದ್ದಾರೆ. ವಿಶ್ವಸಂಸ್ಥೆ ಬಿಗಿ ನಿಲುವು ತಾಳಿ ಇಸ್ರೇಲ್-ಹಮಾಸ್ ಯುದ್ದ ವನ್ನು ನಿಲ್ಲಿಸಬೇಕು. ಚಿಕ್ಕ ರಾಷ್ಟ್ರ ಇಸ್ರೇಲ್ ಶಕ್ತಿಶಾಲಿಯಾಗಿ ಬೆಳೆದಿರುವುದರಿಂದ ಹಮಾಸ್ ಉಗ್ರರಿಗೆ ಪ್ರತ್ಯುತ್ತರ ನೀಡುತ್ತಿದೆ. ಆದರೂ ಯುದ್ದ ಎಂದ ಮೇಲೆ ಏನು ಅರಿಯದ ಮುಗ್ದರ ಜೀವ ಹರಣವಾಗುತ್ತದೆ. ಶಾಂತಿಧೂತನಾದ ಏಸು ಯುದ್ದವನ್ನು ಅಂತ್ಯಗೊಳಿಸಿ ನೆಮ್ಮದಿ ನೆಲೆಸುವಂತೆ ಪ್ರೇರೇಪಿಸಲಿ ಎಂದು ಪ್ರಾರ್ಥಿಸಲಾಯಿತು.

ಯುನೈಟೆಡ್ ಕ್ರಿಶ್ಚಿಯನ್ ಫೋರಂ ಯೂಮನ್ ರೈಟ್ಸ್ ಜಿಲ್ಲಾಧ್ಯಕ್ಷ ಫಾದರ್ ಸಜ್ಜಿಜಾರ್ಜ್, ಪ್ರಧಾನ ಕಾರ್ಯದರ್ಶಿ ರೆವೆರಂಡ್ ಫಾದರ್ ಎಂ.ಎಸ್.ರಾಜು ಇನ್ನು ಮೊದಲಾದವರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!