ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಳೆಗಾಲ, ಚಳಿಗಾಲದಲ್ಲಿ ವೈರಸ್ ಗಳು ಉಲ್ಬಣಗೊಳ್ಳುತ್ತವೆ. ಅದರಲ್ಲೂ ಇತ್ತಿಚೆಗೆ ಡೆಂಗ್ಯೂ ಕೇಸ್ ಹೆಚ್ಚಳವಾಗುತ್ತಿದೆ. ಇದು ಜನರಿಗೆ ಆತಂಕದ ವಾತಾವರಣ ಸೃಷ್ಟಿ ಮಾಡಿದೆ. ಬೆಂಗಳೂರು ನಗರ ಒಂದರಲ್ಲೇ ಒಂದೇ ತಿಂಗಳಲ್ಲಿ ಡೆಂಗ್ಯೂ ಪ್ರಕರಣ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ ಎಂಬುದನ್ನು ಆರೋಗ್ಯ ಇಲಾಖೆ ತಿಳಿಸಿದೆ.
ಕೇವಲ ಒಂದೇ ತಿಂಗಳಲ್ಲಿ 1,400ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿ ಆಗಿವೆ. ಕಳೆದ ತಿಂಗಳು ನವೆಂಬರ್ 1ರಿಂದ ಡಿಸೆಂಬರ್ 8ರವರೆಗೆ ನಗರದಲ್ಲಿ ಒಟ್ಟು 7,600 ಕ್ಕೂ ಹೆಚ್ಚು ಮಂದಿಯಲ್ಲಿ ಡೆಂಗ್ಯೂ ಕಾಯಿಲೆ ಲಕ್ಷಣಗಳು ಕಂಡು ಬಂದವು. ಈ ವೇಳೆ ಅವರನ್ನು ಪರಿಶೀಲನೆಗೆ ಒಳಪಡಿಸಿದಾಗ 1,460ಕ್ಕೂ ಅಧಿಕ ಮಂದಿಗೆ ಡೆಂಗ್ಯೂ ಕಾಯಿಲೆ ಇರುವುದು ದೃಢಪಟ್ಟಿದೆ.
ತಂಪು ವಾತಾವರಣ ಜೊತೆಗೆ ಬಿಸಿಲು, ಆಗಾಗ ಮಳೆಯಂತಹ ವಾತಾವರಣದಿಂದ ಸೊಳ್ಳೆಗಳ ವಿಪರೀತವಾಗಿ ಹೆಚ್ಚಾಗಿವೆ. ಇದರಿಂದ ಡೆಂಗ್ಯೂ ಪ್ರಕರಣ ಕಂಡು ಬರುತ್ತಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ ನಗರದ ನಾಗರೀಕರು ಅರೋಗ್ಯ ಕಾಳಜಿ ವಹಿಸುವುದು ಅಗತ್ಯವಾಗಿದೆ. ಸರಿಯಾದ ಸಮಯಕ್ಕೆ ಮಳೆಯಾಗದ ವಾತಾವರಣದಲ್ಲಿ ಏರುಪೇರಾಗಿರುವ ಕಾರಣ, ಹಲವು ರೀತಿಯ ಕಾಯಿಲೆಗಳಿಗೆ ದಾರಿ ಮಾಡಿಕೊಟ್ಟಂತೆ ಆಗಿದೆ. ಹೀಗಾಗಿ ಜನರು ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸುವುದು ಬಹಳ ಮುಖ್ಯವಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್