ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ನಾಯಕನಹಟ್ಟಿ : ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವವನ್ನು ಇಡೀ ಜಗತ್ತಿಗೆ ಸಾರಿದ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ದೊಡ್ಡ ಕಾರ್ತಿಕೋತ್ಸವ ಡಿಸೆಂಬರ್ 22 ರಂದು ಜರಗಲಿದೆ ಎಂದು ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ದೇವಸ್ಥಾನದ ಕಾರ್ಯನಿರ್ವಾಣಾಧಿಕಾರಿ ಎಚ್. ಗಂಗಾಧರಪ್ಪ ತಿಳಿಸಿದರು.
ಬುಧವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಅವರು ಮಾಹಿತಿ ನೀಡಿದರು.
ಕಾರ್ತಿಕ ಮಾಸದ ಅಂಗವಾಗಿ ಡಿಸೆಂಬರ್ 21ರಂದು ಲಕ್ಷದೀಪೋತ್ಸವ ಬೆಳ್ಳಿ ರಥೋತ್ಸವ ಕಾರ್ಯಕ್ರಮಗಳು ಜರುಗಲಿವೆ.

ಡಿಸೆಂಬರ್ 15 ರಂದು ಈಡಿಗರ ಮುತ್ಯಾಲಪ್ಪ ವಂಶಸ್ಥರಿಂದ ಸಣ್ಣ ಕಾರ್ತಿಕೋತ್ಸವ ಆಚರಿಸುವ ಮೂಲಕ ಆರಂಭವಾಗಿ ಡಿಸೆಂಬರ್ 16ರಂದು ಧನುರ್ಮಾಸ ಪೂಜೆ ತ್ರಿಕಾಲ ಪೂಜಾ ಕಾರ್ಯಕ್ರಮ ಜರುಗಲಿದೆ. ಡಿಸೆಂಬರ್ 18ರಂದು ಬಂಡಿರಂಗ ಸ್ವಾಮಿ ಕಾರ್ತಿಕೋತ್ಸವ ನಡೆಯಲಿದೆ.
ಡಿಸೆಂಬರ್ 21ರಂದು ಲಕ್ಷ ದೀಪೋತ್ಸವ ನಡೆಯಲಿದ್ದು ಬೆಳ್ಳಿ ರಥೋತ್ಸವ ಕಾರ್ಯಕ್ರಮ ನೆರವೇರಲಿದೆ ದೇವಾಲಯದಲ್ಲಿ ಅನ್ನದಾಸೋಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿರುತ್ತದೆ.
ಡಿಸೆಂಬರ್ 22ರಂದು ಸಂಜೆ ಮೂರು ಗಂಟೆಯಿಂದ ದೊಡ್ಡ ಕಾರ್ತಿಕೋತ್ಸವ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದು ಸಂಜೆ ಏಳು ಗಂಟೆಗೆ ದೇವಾಲಯದ ವೇದಿಕೆಯಲ್ಲಿ ರಾಜ್ಯದ ಸುಪ್ರಸಿದ್ಧ ಜಾನಪದ ಕಲೆಯಾದ ಭರತನಾಟ್ಯ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶ್ರೀ ಸ್ವಾಮಿಗೆ ನಿತ್ಯ ರುದ್ರಾಭಿಷೇಕ ಮಾಡಲಿಚ್ಚಿಸುವವರು 2501 ರೂ.ಗಳು ಠೇವಣೆ ನೀಡಿ ತಮ್ಮ ಹೆಸರು ನೋಂದಾಯಿಸಲು ಸೂಚಿಸಲಾಗಿದೆ.
ಈ ಹಿಂದೆ ಸಾವಿರ ರೂಪಾಯಿ ಹಾಗೂ 1500 ರೂಪಾಯಿ ಠೇವಣಿ ಇಟ್ಟಿರುವ ಭಕ್ತಾದಿಗಳು ಮತ್ತೆ ಹೆಚ್ಚುವರಿ ಹಣವನ್ನು ದೇವಸ್ಥಾನದಲ್ಲಿ ಪಾವತಿಸಲು ಸೂಚಿಸಲಾಗಿದೆ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್