Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಸ್ಲಿಮರ ಜೊತೆಗೆ ನಿಲ್ಲುತ್ತೇನೆ ಅನ್ನೋದಲ್ಲ.. ಸಿದ್ದರಾಮಯ್ಯ ಮುಸ್ಲಿಮರೇ : ಈಶ್ವರಪ್ಪ

Facebook
Twitter
Telegram
WhatsApp

ಹುಬ್ಬಳ್ಳಿ: ಇತ್ತಿಚೆಗೆ ಮುಸ್ಲಿಮರ ಪರವಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ‌ ನೀಡಿದ್ದರು. ಆ ಹೇಳಿಕೆ ಮೇಲೆ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದರು. ಇದೀಗ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರ ಜೊತೆಗೆ ನಿಲ್ಲುತ್ತೇನೆ ಅನ್ನುವುದಿಲ್ಲ, ಸಿದ್ದರಾಮಯ್ಯ ಅವರು ಮುಸ್ಲಿಮರೆ ಎಂದಿದ್ದಾರೆ.

 

ಡಿ ಕೆ ಶಿವಕುಮಾರ್ ಅವರು ಮುಸಲ್ಮಾನರನ್ನು ಮೈ ಬ್ರದರ್ ಎನ್ನುತ್ತಾರೆ. ಇದರ ಅರ್ಥ ಏನು..? ಮುಸ್ಲಿಮರನ್ನು ತೃಪ್ರಿ ಪಡಿಸಲು ಅವಾರು ಯಾವ ಮಟ್ಟಕ್ಕೆ ಬೇಕಾದರೂ ಹೋಗಲು ಸಿದ್ಧರಿರುತ್ತಾರೆ. ಕುಮಾರಸ್ವಾಮಿ ಅವರು ಬ್ರದರ್ ಎನ್ನುವುದು ಏನಣ್ಣ ಚೆನ್ನಾಗಿದ್ದೀವಿ ಅನ್ನುವ ಅರ್ಥದಲ್ಲಿ. ವಯಸ್ಸಾದವರನ್ನು ಬ್ರದರ್ ಎನ್ನುತ್ತಾರೆ. ಸಿದ್ದರಾಮಯ್ಯ ಅವರು ಸ್ವಾರ್ಥದಲ್ಲಿ ಹೀಗೆ ಕರೆಯುತ್ತಾರೆ. ರಾಷ್ಟ್ರದ್ರೋಹಿಯನ್ನು ಬ್ರದರ್ ಎನ್ನುತ್ತಾರೆ. ಎಷ್ಟರ ಮಟ್ಟಿಗೆ ಸೊಕ್ಕು ಇರಬೇಕು ಎಂದು ಕಿಡಿಕಾರಿದ್ದಾರೆ.

 

ಸಿದ್ದರಾಮಯ್ಯ ಅವರು ಈ ಹಿಂದೆ ಹೀಗೆ ಮಾಡಿಯೇ ಅಧಿಕಾರ ಕಳೆದುಕೊಂಡಿದ್ದರು. ಆದರೂ ಅವರಿಗೆ ಬುದ್ದಿ ಬಂದಿಲ್ಲ. ಸಿದ್ದರಾಮಯ್ಯ ಎಲ್ಲ ಸಮಾಜವನ್ನು ಮೈಮೇಲೆ ಎಳೆದುಕೊಂಡರು. ಜಾತಿ ಒಡೆದ ನಂತರ ಮುಸ್ಲಿಮರು ಮಾತ್ರ ಗತಿ ಎಂದು 10 ಸಾವಿರ ಕೋಟಿ ರೂಪಾಯಿ ಕೊಡುತ್ತೇನೆ ಎಂದಿದ್ದಾರೆ. ಅದು ಪ್ರೂವ್ ಆಗಬೇಕು,ಅದು ಅವರ ವಯಕ್ತಿಕ ವಿಚಾರ. ನಾವು ಮುಸ್ಲಿಮರ ವಿರೋಧಿ‌ ಅಲ್ಲ. ನಾವು ರಾಷ್ಟ್ರದ್ರೋಹಿ ಮುಸ್ಲಿಮರ ವಿರೋಧಿ ಎಂದು ಹೇಳುವ ಮೂಲಕ ಸಮಾವೇಶದಲ್ಲಿ ಮುಸ್ಲಿಂ ಗುರುಗಳ ಬಗ್ಗೆ ವೇದಿಕೆ ಹಂಚಿಕೊಂಡಿದ್ದರ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಶಾಸಕ ಯತ್ನಾಳ್ ಕೂಡ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ತನಿಖೆಯಾಗಬೇಕೆಂದು ಒತ್ತಾಯಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿದ್ದರಾಮಯ್ಯ ಸರ್ಕಾರಕ್ಕೆ ವರ್ಷದ ಸಂಭ್ರಮ : ಬಿಜೆಪಿಯ ಪ್ಲ್ಯಾನ್ ಏನು ಗೊತ್ತಾ..?

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿ, ಸ್ವತಂತ್ರವಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. ಇದೀಗ ಆ ಸಂತಸದ ಗಳಿಗೆಗೆ ಭರ್ತಿ ಒಂದು ವರ್ಷವಾಗುತ್ತಿದೆ. ಮೇ20ಕ್ಕೆ ಸರ್ಕಾರ ರಚನೆ ಮಾಡಿ

ಬಿಜೆಪಿ – ಜೆಡಿಎಸ್ ಪಕ್ಷದಿಂದ 25 ರಿಂದ 30 ಜನ  ನಮ್ಮ ಪಕ್ಷಕ್ಕೆ ಬರುತ್ತಾರೆ : ಚಿತ್ರದುರ್ಗದಲ್ಲಿ ಸಚಿವ ಸುಧಾಕರ್ ಹೇಳಿಕೆ

ವರದಿ ಮತ್ತು ಫೋಟೋ ಕೃಪೆ,  ಸುರೇಶ್ ಪಟ್ಟಣ್,                         ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

error: Content is protected !!