ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮೈಸೂರು: ಸಂಸತ್ ಒಳಗೆ ಇಬ್ಬರು ಯುವಕರು ಏಕಾಏಕಿ ನುಗ್ಗಿ ದಾಳಿ ನಡೆಸಿರುವ ಘಟನೆ ಸಂಬಂಧ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಅದರಲ್ಲಿ ಒಬ್ಬ ಆರೋಪಿ ಮೈಸೂರಿನ ಮನೋರಂಜನ್ ಆಗಿದ್ದಾನೆ. ಈ ಘಟನೆ ಬಗ್ಗೆ ಮನೋರಂಜನ್ ತಂದೆ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನ ವಿಜಯನಗರದಲ್ಲಿ ಮಾತನಾಡಿದ ಮನೋರಂಜನ್ ತಂದೆ ದೇವರಾಜೇಗೌಡ ಅವರು, ಮನೋರಂಜನ್ ಬೆಂಗಳೂರಿನ ಬಿಐಟಿ ಕಾಲೇಜಿನಲ್ಲಿ 2014ರಲ್ಲಿ ಬಿಇ ಸೀಟನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ಕೊಟ್ಟಿದ್ದರು. ಕೆಲಸ ಇರಲಿಲ. ತೋಟಕ್ಕೆ ಬರುತ್ತಿದ್ದ ಖರ್ಚಿಗೆ ಬೇಕಾದಾಗ ಹಣ ತೆಗೆದುಕೊಳ್ಳುತ್ತಿದ್ದ. 34 ವರ್ಷ ಆಯ್ತು. ಮದುವೆಯಾಗು ಅಂತಿದ್ದೆ. ಇರಪ್ಪ ನಾನು ಏನೋ ಮಾಡಬೇಕು ಅಂತಿದ್ದ. ಯಾವಾಗಲೂ ಭಗತ್ ಸಿಂಗ್, ವಿವೇಕಾನಂದ ಅವರ ಪುಸ್ತಕವನ್ನೇ ಓದುತ್ತಿದ್ದ. ದೆಹಲಿ, ಬೆಂಗಳೂರು ಅಂತ ಓಡಾಡುತ್ತಿದ್ದ. ಹೋಗುತ್ತಾ ಇದ್ದ, ಬರುತ್ತಾ ಇದ್ದ. ಆದರೆ ಎಲ್ಲಿಗೆ ಹೋಗುತ್ತಿದ್ದ ಎಂಬುದು ಮಾತ್ರ ಗೊತ್ತಿಲ್ಲ.
ನಾವೂ ಯಾವ ಪಕ್ಷದಲ್ಲೂ ಗುರುತಿಸಿಕೊಂಡಿಲ್ಲ. ಪ್ರತಾಪ್ ಸಿಂಹ ಅವರಿಗೆ ವೋಟು ಹಾಕಿದ್ದೇವೆ. ಮನೆಯಲ್ಲಿ, ಸಮಾಜದಲ್ಲಿ ಎಲ್ಲಿಯೂ ಯಾರಿಗೂ ಆತ ಕೆಟ್ಟದ್ದು ಮಾಡಿದ್ದವನಲ್ಲ. ಈಗ ಯಾಕೆ ಈ ರೀತಿ ಮಾಡಿದ ಎಂಬುದು ತಿಳಿಯುತ್ತಿಲ್ಲ. ಮಗ ಈ ಥರ ಮಾಡ್ತಾನೆ ಅಂತ ನನಗೆ ಗೊತ್ತಿರಲಿಲ್ಲ. ಅವನೇನಾದ್ರೂ ಒಳ್ಳೆಯದು ಮಾಡಿದ್ರೆ ದೇವರು ಕಾಪಾಡಲಿ. ಕೆಟ್ಟದ್ದನ್ನು ಮಾಡಿದ್ರೆ ನಾನು ಖಂಡಿಸುತ್ತೇನೆ. ಸಮಾಜಕ್ಕೆ ಅನ್ಯಾಯ ಮಾಡಿದ್ದಾನೆಂದರೆ ಆತ ನನ್ನ ಮಗನೇ ಅಲ್ಲ ಎಂದು ಮಗನ ಬಗ್ಗೆ ಮಾತನಾಡಿದ್ದಾರೆ.
ಈಗಾಗಲೇ ಪೊಲೀಸರು ವಿಜಯನಗರದಲ್ಲಿರುವ ಮನೋರಂಜನ್ ನಿವಾಸಕ್ಕೆ ಪೊಲೀಸರು ದೌಡಾಯಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಎಸಿಪಿ ಗಜೇಂದ್ರ ಪ್ರಸಾದ್, ವಿಜಯನಗರ ಪಿಐ ಸುರೇಶ್ ಭೇಟಿ ನೀಡಿ ಮನೋರಂಜನ್ ತಂದೆ ದೇವರಾಜೇಗೌಡ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್