Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೋಮಣ್ಣ ಸಿಎಂ ಆಗ್ತೀನಿ ಎಂಬ ಭ್ರಮೆಯಲ್ಲಿದ್ದರು : ರೇಣುಕಾಚಾರ್ಯ

Facebook
Twitter
Telegram
WhatsApp

ದಾವಣಗೆರೆ: ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರನ್ನು ಯಾರಾದರೂ ಟೀಕಿಸಿದರೆ ಅದನ್ನು ರೇಣುಕಾಚಾರ್ಯ ತಡೆದುಕೊಳ್ಳುವುದಿಲ್ಲ. ಬೇಗನೇ ಪ್ರತಿಕ್ರಿಯೆ ನೀಡಿ ಬಿಡುತ್ತಾರೆ. ಅದರಲ್ಲೂ ಶಾಸಕ ಯತ್ನಾಳ್ ಹಾಗೂ ಸೋಮಣ್ಣ ಅವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧ ಹಾಗೂ ವಿಜಯೇಂದ್ರ ಅವರ ವಿರುದ್ಧ ಮಾತನಾಡಿದರೆ ಇನ್ಮುಂದೆ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

 

ಬಿ ಎಸ್ ಯಡಿಯೂರಪ್ಪ ವಿರುದ್ಧ ಬೇರೆ ಪಕ್ಷದಿಂದ ಕರೆತಂದ ಯತ್ನಾಳ್ ಹಾಗೂ ಸೋಮಣ್ಣ ಇವರಿಬ್ಬರೇ ಮಾತನಾಡುತ್ತಿರುವುದು. ಬಿಎಸ್ವೈ ವಿರುದ್ಧ ಮಾತನಾಡುವುದಕ್ಕೆ ಯಾವ ನೈತಿಕತೆ ಇದೆ. ಯತ್ನಾಳ್ ಹಾಗೂ ಸೋಮಣ್ಣ ಎಲ್ಲಿಯವರೆಗೂ ಬಿಎಸ್ವೈ ಹಾಗೂ ವಿಜಯೇಂದ್ರ ಅವರ ವಿರುದ್ಧ ಮಾತನಾಡುತ್ತಾರೋ ಅಲ್ಲಿಯವರೆಗೂ ನಾವೂ ಮಾತನಾಡುತ್ತೇವೆ ಎಂದಿದ್ದಾರೆ.

 

ನಮಗೂ ತಾಳ್ಮೆ ಇದೆ. ಇದನ್ನೆಲ್ಲ ಸಹಿಸುವುದಕ್ಕೆ ಆಗುವುದಿಲ್ಲ. ಪ್ರತಿದಿನ ಇಬ್ಬರು ಮಾತನಾಡಿದರೆ ಯಡಿಯೂರಪ್ಪ ಅವರ ತೂಕ ಕಡಿಮೆ ಆಗುತ್ತದಾ..? ಯಡಿಯೂರಪ್ಪ ಅವರು ನಡೆದ ಹಾದಿಯ ಮಣ್ಣು ತೆಗೆದುಕೊಂಡು ಚಾಮರಾಜನಗರ ಹಾಗೂ ಮೈಸೂರು ಜನ ಹಣೆಗೆ ಇಟ್ಟುಕೊಳ್ಳುತ್ತಾರೆ. ಅಷ್ಟು ಹೋರಾಟದಿಂದ ಮೇಲೆ ಬಂದು ಜನರಿಗಾಗಿ ಜೀವ ಮುಡಿಪಿಟ್ಟ ನಾಯಕ ಅವರು. ಯತ್ನಾಳ್ ಹಾಗೂ ಸೋಮಣ್ಣ ಅವರ ಪಾಪದ ಕೊಡ ತುಂಬಿದೆ. ಅದಕ್ಕೆ ಆದಷ್ಟು ಬೇಗ ಅಂತ್ಯ ಕಾಣುತ್ತದೆ. ಅದಕ್ಕೆಂದೆ ಯಡಿಯೂರಪ್ಪ ಅವರನ್ನು ಜನರ ಮುಂದೆ ವಿಲನ್ ಮಾಡಲು ಹೊರಟಿದ್ದಾರೆ. ಟೀಕೆ ಮಾಡುವುದನ್ನು ಕೈಬಿಡಬೇಕು. ನಾವೆಲ್ಲರೂ ವಿಜಯೇಂದ್ರ ಅವರಿಗೆ ಸಾಥ್ ನೀಡುತ್ತೇವೆ. ಸಮಸ್ಯೆಗಳು ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಇನ್ನು ಮುಂದೆಯಾದರೂ ತಿದ್ದಿಕೊಳ್ಳಲಿ ಇಲ್ಲವಾದರೆ ನಾವೂ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!