ಬೆಳಗಾವಿ: ಪರಿಷತ್ ಕಲಾಪದಲ್ಲಿ ಇಂದು ಚಕ್ರವರ್ತಿ ಸೂಲಿಬೆಲೆ ವಿಚಾರ ಚರ್ಚೆಗೆ ಬಂದಿದೆ. ಬಿಜೆಪಿ ಸದಸ್ಯ ತುಳಸಿ ಮುನಿರಾಜು ಗೌಡ, ಮಾತಿಗೆ ಗೃಹಸಚಿವ ಡಾ. ಜಿ ಪರಮೇಶ್ವರ್ ಗರಂ ಆಗಿ ಉತ್ತರಿಸಿದ್ದಾರೆ.
ಚಕ್ರವರ್ತಿ ಸೂಲಿಬೆಲೆಯಂತ ಯುವಕರ ಕಣ್ಮಣಿ ಮೇಲೆ ಗೂಂಡಾ ಕಾಯ್ದೆ ದಾಖಲು ಮಾಡಿದ್ದಾರೆ ತುಳಸಿ ಮುನಿರಾಜು ಗೌಡ ಪ್ರಶ್ನೆ ಕೇಳಿದ್ದರು. ಸಂಘಟನೆಯ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲು ಮಾಡಲಾಗುತ್ತಿದೆ ಎಂದು ಪ್ರಶ್ನೆ ಕೇಳಿದ್ದರು.
ಈ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್, ಚಕ್ರವರ್ತಿ ಸೂಲಿಬೆಲೆ ಅವರ ಪ್ರಚೋದನಕಾರಿ ಭಾಷಣದಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ ಎನ್ನುವುದಾದರೆ ಪರಿಶೀಲನೆ ಮಾಡುತ್ತೇವೆ ಎಂದಿದ್ದಾರೆ. ಸಂಘಟನೆಯ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲು ಮಾಡಲಾಗುತ್ತಿದೆ. ಶಿವಮೊಗ್ಗ ಕೋಮುಗಲಭೆಯನ್ನು ಅದೊಂದು ಸಣ್ಣ ಘಟನೆ ಅಂತ ಸಚಿವರು ಹೇಳಿದ್ದರು.
ಚಕ್ರವರ್ತಿ ಸೂಲಿಬೆಲೆ ಮೇಲೆ ಕಮ್ಯುನಲ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲು ಮಾಡಬೇಕು ಅಂತ ನೀವು ಹೇಳ್ತಾ ಇದ್ದೀರಾ? ನಾವು ಇನ್ನೂ ಕಮ್ಯುನಲ್ ಕೇಸ್ ಹಾಕಿಲ್ಲ. ನೀವು ಹೇಳಿದರೆ ಕಮ್ಯುನಲ್ ಆಕ್ಟ್ ಅಡಿ ಕೇಸ್ ಹಾಕ್ತೇವೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















