Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸೆಂಬರ್ 16 ರಂದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಡೆಸ್ಟಿನಿ 2023ರ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.15 :  ನಗರದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಡಿಯಲ್ಲಿ ಪ್ರತಿವರ್ಷವೂ ಆಯೋಜಿಸುವ “ಡೆಸ್ಟಿನಿ” – ಬೃಹತ್ ಸಾಂಸ್ಕøತಿಕ ಹಬ್ಬವನ್ನು ನಾಳೆ ಡಿಸೆಂಬರ್ 16 ರಂದು ಆಯೋಜಿಸಲಾಗಿದೆ.

“ವಿಜ್ಞಾನ ವಸ್ತುಪ್ರದರ್ಶನ”ವನ್ನು ಚಳ್ಳಕೆರೆ ಸಮೀಪವಿರುವ ಕುದಾಪುರದ ಡಿ.ಆರ್.ಡಿ.ಓ ಸಂಸ್ಥೆಯ ವಿಜ್ಞಾನಿಗಳಾಗಿರುವ ಡಾ. ಆರ್ ಮಹೇಶ್‍ಬಾಬು ಹಾಗೂ ಡಾ. ಸಲೀಂ ಸಾಜಿದ್‍ರವರು ವಸ್ತುಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶಾಸಕ ಎಂ.ಚಂದ್ರಪ್ಪ,  ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀಮತಿ ಚಂದ್ರಕಲಾ, ಕಾರ್ಯನಿರ್ವಹಣಾಧಿಕಾರಿಗಳಾದ ಎಂ.ಸಿ.ರಘುಚಂದನ್ ಹಾಗೂ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವಿಜ್ಞಾನ ವಸ್ತುಪ್ರದರ್ಶನವು ಅಂತರ್-ಶಾಲಾ ಹಾಗೂ ಅಂತರ್-ಕಾಲೇಜು ಸ್ಪರ್ಧೆಯಾಗಿದ್ದು, ಮೂರು ಹಂತಗಳಲ್ಲಿ ಆಯೋಜನೆಯಾಗಿದೆ. ಮೊದಲನೇ ಹಂತದಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಎರಡನೇ ಹಂತದಲ್ಲಿ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳು ಹಾಗೂ ಮೂರನೇ ಹಂತದಲ್ಲಿ ಪದವಿಪೂರ್ವ ಹಂತದ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಏರ್ಪಡಿಸಲಾಗಿದೆ. ಚಿತ್ರದುರ್ಗ ನಗರದ ವಿವಿಧ ಶಾಲಾ ಕಾಲೇಜುಗಳಿಂದ ಒಟ್ಟು 182 ವಿವಿಧ ವಿಜ್ಞಾನ ಮಾದರಿಗಳು ಮತ್ತು ಪರಿಕಲ್ಪನೆಗಳನ್ನು ಪ್ರದರ್ಶನಗೊಳ್ಳುತ್ತಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!