Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿ ಮತ್ತೊಂದು ಅಹಿಂದ ಸಮಾವೇಶಕ್ಕೆ ಕಾಂಗ್ರೆಸ್ ಸಿದ್ದತೆ..!

---Advertisement---

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರು ಚಿತ್ರದುರ್ಗದಲ್ಲಿ ಮತ್ತೊಮ್ಮೆ ಅಹಿಂದ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 30ರಂದು ಈ ಸಮಾವೇಶ ನಡೆಸಿ, ಸುಮಾರು 10 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ನಿರೀಕ್ಷೆ ಇದೆ. ಈ ಮೂಲಕ ಶಕ್ತಿ ಪ್ರದರ್ಶನಕ್ಕೆ ಇಳಿಯಲಿದ್ದಾರೆ.

ಹಿಂದುಳಿದ ವರ್ಗಗಳ ನಾಯಕ ಸ್ಥಾನಕ್ಕೆ ಸಿಕ್ಕಾಪಟ್ಟೆ ಪೈಪೋಟಿ ನಡೆಯುತ್ತಿದೆ. ಚಿತ್ರದುರ್ಗದಲ್ಲಿ ಮತ್ತೊಮ್ಮೆ ಅಹಿಂದ ಸಮಾವೇಶ ನಡೆಯಲಿದ್ದು, ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬೆನ್ನೆಲುಬಾಗಿ ನಿಲ್ಲಲಿದ್ದಾರೆ. ಈಗಾಗಲೇ ಈ ಸಂಬಂಧ ಎಲ್ಲಾ ಸಿದ್ದತೆಗಳು ನಡೆಯುತ್ತಿವೆ.

ಜಾತಿ ಗಣತಿ ವರದಿಗೆ ಹಲವರ ವಿರೋಧವಿದೆ. ಹಲವರ ಬೆಂಬಲವೂ ಇದೆ. ಸಿದ್ದರಾಮಯ್ಯ ಬೆಂಬಲಿಗರಿಂದ ಸದ್ಯ ಜಾತಿ ಗಣತಿ ವರದಿ ಜಾರಿಗೆ ಚಿತ್ರದುರ್ಗದಲ್ಲಿ ಇದೇ ತಿಂಗಳ 30ರಂದು ಬೃಹತ್ ಸಮಾವೇಶ ನಡೆಸಲು ಯೋಜನೆ ರೂಪಿಸಲಾಗಿದೆ. ಸಿದ್ದರಾಮಯ್ಯ ಆಪ್ತರು ಆಗಾಗ ಸಿದ್ದರಾಮೋತ್ಸವ ಹಾಗೂ ಸಮಾವೇಶಗಳನ್ನು ಮಾಡುವ ಮೂಲಕ ತನ್ನ ನಾಯಕನ ಶಕ್ತಿ ಪ್ರದರ್ಶನವನ್ನು ಮಾಡುತ್ತಲೇ ಇರುತ್ತಾರೆ.

ಈಗಾಗಲೇ ಲೋಕಸಭಾ ಚುನಾವಣೆಯ ತಯಾರಿ ಜೋರಾಗಿದೆ. ಇದರ ನಡುವೆ ಬಿಜೆಪಿ ನಾಯಕರು ಲೋಕಸಭೆಯ ಬಳಿಕ ಸರ್ಕಾರ ಬೀಳಲಿದೆ ಎಂದೇ ಹೇಳುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ತಯಾರಿಯಲ್ಲಿ ಎಚ್ಚರದಿಂದ ಇದ್ದಾರೆ. ಬಿಜೆಪಿ ಪಕ್ಷದ ನಾಯಕರ ಹೇಳಿಕೆಗಳನ್ನು ಅಲ್ಲಗಳೆಯುವ ಕೆಲಸ ಮಾಡಲು ಹೊರಟಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಅವರ ಶಕ್ತಿ ಹಾಗೆ ಇದೆ ಎಂದು ಸಾಬೀತು ಮಾಡಲು ಬೆಂಬಲಿಗರು ಹೊರಟಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...