Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದ ಜನತೆಯಿಂದ ಸಂಗ್ರಹವಾಗುವ ತೆರಿಗೆ 4 ಲಕ್ಷ ಕೋಟಿ : ಆದರೆ ಕೇಂದ್ರ ಕೊಡುತ್ತಾ ಇರೋದು..: ಸಿಎಂ ಹೇಳಿದ್ದೇನು..?

Facebook
Twitter
Telegram
WhatsApp

 

ಹುಬ್ಬಳ್ಳಿ: ಜನ ಅದಕ್ಕೆ ಇದಕ್ಕೆ ಅಂತ ರಾಜ್ಯ ಮತ್ತು ಕೇಂದ್ರಕ್ಕೆ ತೆರಿಗೆಯನ್ನು ಕಟ್ಟುತ್ತಲೇ ಇರುತ್ತಾರೆ. ಆ ತೆರಿಗೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯದ ಜನ ನಾಲ್ಕು ಲಕ್ಷ ಕೋಟಿ ತೆರಿಗೆ ಹಣ ಕಟ್ಟುತ್ತಿದ್ದರು, ಕೇಂದ್ರದಿಂದ ರಾಜ್ಯಕ್ಕೆ ಬರುತ್ತಿರುವುದು, ಕೇವಲ ಐವತ್ತು ಸಾವಿರ ಕೋಟಿ ಎಂದಿದ್ದಾರೆ.

ಏನದಾರೂ ವಿಪತ್ತು ಸಂಭವಿಸಿದರೆ ಆಗ ರಾಷ್ಟ್ರೀಯ ವಿಪತ್ತು ಸಂಗ್ರಹಣಾ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ಆದರೆ ಈ ಬಾರಿ ಬರ ಪರಿಹಾರ ನೀಡಿ ಎಂದು ಎಷ್ಟೇ ಮನವಿ ಮಾಡಿದರು ಕೇಂದ್ರ ಮಾತ್ರ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಕ. ಈ ಬಗ್ಗೆಯೂ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಕೇಂದ್ರ ಹಣವಲ್ಲ. ನಮ್ಮ ರಾಜ್ಯದಿಂದ ನಾಲ್ಕು ಲಕ್ಷ ಕೋಟಿ ತೆರಿಗೆ ಹಣ ಸಂಗ್ರಹಿಸಲಾಗಿದೆ‌. ಅದರಲ್ಲಿ ನಾವೂ 37 ಸಾವಿರ ಕೋಟಿ ತೆರಿಗೆ ಹಣ ಪಡೆಯುತ್ತಿದ್ದೇವೆ ಎಂದಿದ್ದಾರೆ.

ಕೇಂದ್ರ ಪ್ರಾಯೋಜಿತ ಯೋಜನೆಗೆ 13,000 ಕೋಟಿ ರೂ. ನೀಡಲಾಗುತ್ತಿದೆ. ಇದು ನ್ಯಾಯವೇ ಎಂದು ಪ್ರಶ್ನಿಸಿದರೆ ಬಿಜೆಪಿಯವರು ಜಗಳಕ್ಕೆ ಬರುತ್ತಾರೆ. ಇದು ಅವರ ಹಣ ಎಂದು ಹೇಳುತ್ತಾರೆ. ಆದರೆ ಇದು ಕನ್ನಡಿಗರು ಪಾವತಿಸುವ ತೆರಿಗೆ ಹಣ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಮಹಾರಾಷ್ಟ್ರದ ನಂತರದ ಎರಡನೇ ಸ್ಥಾನದಲ್ಲಿದೆ. ಆದರೆ ಅವರು ನಮಗೇನು ಕೊಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!