Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಗಮ ಮಂಡಳಿ ಪಟ್ಟಿ ಅಂತಿಮ ಮಾಡಿಕೊಂಡೇ ಬರುತ್ತೇನೆ : ಡಿಕೆ ಶಿವಕುಮಾರ್

Facebook
Twitter
Telegram
WhatsApp

 

ಸರ್ಕಾರದಲ್ಲಿ ಅಸಮಾಧಾನಿತರನ್ನು ಸಮಾಧಾನ ಮಾಡುವುದಕ್ಕೆ ನಿಗಮ ಮಂಡಳಿಯೂ ಒಂದು ದಾರಿಯೇ ಸರಿ. ಆದರೆ ಸರ್ಕಾರ ರಚನೆಯಾಗಿ ಹಲವು ತಿಂಗಳಾದರೂ ಇನ್ನು ನಿಗಮ ಮಂಡಳಿಗಳ ಪಟ್ಟಿ ಫೈನಲ್ ಆಗಿಲ್ಲ. ಇದಕ್ಕೆ ಕಾರಣ, ಸಿಎಂ ಹಾಗೂ ಡಿಸಿಎಂ ಆಪ್ತ ಬಳಗದವರಿಗೆ ಸ್ಥಾನ ಸಿಗಬೇಕು ಎಂಬ ಹಠ. ಆದರೆ ಇಂದು ಇದರ ಪಟ್ಟಿ ಫೈನಲ್ ಮಾಡಿಕೊಂಡೇ ಬರುತ್ತಾರೆ ಎನ್ನಲಾಗುತ್ತಿದೆ.

ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಸಂಜೆ ವೇಳೆಗೆ ಸಿಎಂ ಪ್ರವಾಸವಾಗುತ್ತಾರೆ. ಈಗಿನ ಹಂತದಲ್ಲಿ ಶಾಸಕರಿಗೆ ಮಾತ್ರ ಸಿಗಬಹುದು ಎಂದು ಹೇಳಲಾಗುತ್ತಿದೆ. ಆರಂಭದಲ್ಲಿಯೇ ಹಲವು ಷರತ್ತುಗಳನ್ನು ಹಾಕಲಾಗಿದೆ. ಈಗ ಹೈಕಮಾಂಡ್ ಬಳಿ ಒಪ್ಪಿಗೆ ಪಡೆದುಕೊಳ್ಳಲಾಗುತ್ತಿದೆ. ಹೀಗಾಗಿ ಇಂದು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ

ಅದಕ್ಕೂ ಮುನ್ನ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಈಗಾಗಲೇ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಕಳುಹಿಸಿದ್ದೇವೆ. ಈಗ ನಿಗಮ ಮಂಡಳಿ ಪಟ್ಟಿ ಫೈನಲ್ ಮಾಡಿಕೊಂಡೆ ಬರುತ್ತೇವೆ. ದೆಹಲಿ, ನಾಗಪುರದಲ್ಲಿ ನಡೆಯುವ CWC ಸಭೆಯಲ್ಲಿ ಬಾಗವಹಿಸುತ್ತೇವೆ ಎಂದು ದೆಹಲಿ ಪ್ರವಾಸದ ಬಗ್ಗೆ ತಿಳಿಸಿದ್ದಾರೆ.

ಇನ್ನು ನಿಗಮ ಮಂಡಳಿಗಳ ಸ್ಥಾನ ಪಡೆಯುವುದಕ್ಕೂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿಯೇ ಇದೆ. ಆದರೆ ಶಾಸಕರಿಗೆ ಮಾತ್ರ ನಿಗಮ ಮಂಡಳಿಯಲ್ಲಿ ಸ್ಥಾನವನ್ನು ನೀಡುತ್ತಿದ್ದಾರೆ. ಸ್ಥಾನ ನೀಡಿದ ಮೇಲೂ ಹಲವರು ಅಸಮಾಧಾನ ಹೊರ ಹಾಕಬಹುದು. ಹೀಗಾಗಿಯೇ ಮೊದಲೇ ಎಲ್ಲಾ ಷರತ್ತುಗಳನ್ನು ತಿಳಿಸಿ, ಪಟ್ಟಿ ಫೈನಲ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ನಿರ್ಧಾರ ಮಾಡಿಯೇ ಬರುತ್ತೇವೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!