Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಿಗಮ ಮಂಡಳಿ ಪಟ್ಟಿ ಅಂತಿಮ ಮಾಡಿಕೊಂಡೇ ಬರುತ್ತೇನೆ : ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್
---Advertisement---

 

ಸರ್ಕಾರದಲ್ಲಿ ಅಸಮಾಧಾನಿತರನ್ನು ಸಮಾಧಾನ ಮಾಡುವುದಕ್ಕೆ ನಿಗಮ ಮಂಡಳಿಯೂ ಒಂದು ದಾರಿಯೇ ಸರಿ. ಆದರೆ ಸರ್ಕಾರ ರಚನೆಯಾಗಿ ಹಲವು ತಿಂಗಳಾದರೂ ಇನ್ನು ನಿಗಮ ಮಂಡಳಿಗಳ ಪಟ್ಟಿ ಫೈನಲ್ ಆಗಿಲ್ಲ. ಇದಕ್ಕೆ ಕಾರಣ, ಸಿಎಂ ಹಾಗೂ ಡಿಸಿಎಂ ಆಪ್ತ ಬಳಗದವರಿಗೆ ಸ್ಥಾನ ಸಿಗಬೇಕು ಎಂಬ ಹಠ. ಆದರೆ ಇಂದು ಇದರ ಪಟ್ಟಿ ಫೈನಲ್ ಮಾಡಿಕೊಂಡೇ ಬರುತ್ತಾರೆ ಎನ್ನಲಾಗುತ್ತಿದೆ.

ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಸಂಜೆ ವೇಳೆಗೆ ಸಿಎಂ ಪ್ರವಾಸವಾಗುತ್ತಾರೆ. ಈಗಿನ ಹಂತದಲ್ಲಿ ಶಾಸಕರಿಗೆ ಮಾತ್ರ ಸಿಗಬಹುದು ಎಂದು ಹೇಳಲಾಗುತ್ತಿದೆ. ಆರಂಭದಲ್ಲಿಯೇ ಹಲವು ಷರತ್ತುಗಳನ್ನು ಹಾಕಲಾಗಿದೆ. ಈಗ ಹೈಕಮಾಂಡ್ ಬಳಿ ಒಪ್ಪಿಗೆ ಪಡೆದುಕೊಳ್ಳಲಾಗುತ್ತಿದೆ. ಹೀಗಾಗಿ ಇಂದು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ

ಅದಕ್ಕೂ ಮುನ್ನ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಈಗಾಗಲೇ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಕಳುಹಿಸಿದ್ದೇವೆ. ಈಗ ನಿಗಮ ಮಂಡಳಿ ಪಟ್ಟಿ ಫೈನಲ್ ಮಾಡಿಕೊಂಡೆ ಬರುತ್ತೇವೆ. ದೆಹಲಿ, ನಾಗಪುರದಲ್ಲಿ ನಡೆಯುವ CWC ಸಭೆಯಲ್ಲಿ ಬಾಗವಹಿಸುತ್ತೇವೆ ಎಂದು ದೆಹಲಿ ಪ್ರವಾಸದ ಬಗ್ಗೆ ತಿಳಿಸಿದ್ದಾರೆ.

ಇನ್ನು ನಿಗಮ ಮಂಡಳಿಗಳ ಸ್ಥಾನ ಪಡೆಯುವುದಕ್ಕೂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿಯೇ ಇದೆ. ಆದರೆ ಶಾಸಕರಿಗೆ ಮಾತ್ರ ನಿಗಮ ಮಂಡಳಿಯಲ್ಲಿ ಸ್ಥಾನವನ್ನು ನೀಡುತ್ತಿದ್ದಾರೆ. ಸ್ಥಾನ ನೀಡಿದ ಮೇಲೂ ಹಲವರು ಅಸಮಾಧಾನ ಹೊರ ಹಾಕಬಹುದು. ಹೀಗಾಗಿಯೇ ಮೊದಲೇ ಎಲ್ಲಾ ಷರತ್ತುಗಳನ್ನು ತಿಳಿಸಿ, ಪಟ್ಟಿ ಫೈನಲ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ನಿರ್ಧಾರ ಮಾಡಿಯೇ ಬರುತ್ತೇವೆ ಎಂದು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...