Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಎತ್ತಿನ ಹೊಳೆ ಯೋಜನೆಯ ಅಪ್ಡೇಟ್ ನೀಡಿದ ಗೃಹ ಸಚಿವರು : ಎಷ್ಟು ವರ್ಷದ ಟಾರ್ಗೆಟ್ ಗೊತ್ತಾ..?

ಸಚಿವ ಪರಮೇಶ್ವರ್
---Advertisement---

 

ಬೆಂಗಳೂರು: ಎತ್ತಿನಹೊಳೆ ಯೋಜನೆಯಿಂದ ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ. ಆದರೆ ಈ ಯೋಜನೆಗೆ ಇನ್ನು ಸರಿಯಾದ ಅಡಿಪಾಯ ಬೀಳುತ್ತಿಲ್ಲ. ತಡವಾಗುತ್ತಿರುವುದು ಯಾಕೆ ಎಂಬುದನ್ನು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಈ ಸಂಬಂಧ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದಿಂದ ಬಿಜೆಪಿ ಸರ್ಕಾರ ಹಣವನ್ನು ಬಿಡುಗಡೆ ಮಾಡಿಲ್ಲ. ಹೀಗಾಗಿ ಯೋಜನೆಯ ಕೆಲಸ ಕಾರ್ಯಗಳು ಸ್ಥಗಿತಗೊಂಡಿದ್ದವು. ಈಗ ನಮ್ಮ ಸರ್ಕಾರ ಯೋಜನೆಗೆ ಹಣ ಬಿಡುಗಡೆ ಮಾಡಲಿದೆ. ಇನ್ನು ಎರಡು ವರ್ಷದ ಒಳಗೆ ಯೋಜನೆ ಪೂರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನು ಯೋಜನೆಗೆ ವರ್ಷದಿಂದ ವರ್ಷಕ್ಕೆ ಅಂದಾಜು ವೆಚ್ಚ ಜಾಸ್ತಿಯಾಗುತ್ತಲೇ ಇರುತ್ತದೆ. ಪ್ರಸ್ತುತ 22 ಸಾವಿರ ಕೋಟಿ ರೂಪಾಯಿ ಅಂದಾಜು ವೆಚ್ಚವಾಗಿದೆ. ವಾಟರ್ ಸ್ಟೋರೆಜ್ಗಾಗಿ ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ 8 ಲಕ್ಷ ರೂ. ಹಾಗೂ ದೊಡ್ಡಬಳ್ಳಾಪುರದಲ್ಲಿ ಎಕರೆ ಭೂಮಿಗೆ 32 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಗಿದೆ. ಎಲ್ಲ ರೈತರಿಗೂ ಒಂದೇ ರೀತಿಯ ಸಮಾನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗಿದೆ. ಇನ್ನು ಎರಡು ವರ್ಷದ ಒಳಗೆ ಈ ಯೋಜನೆಯನ್ನು ಪೂರ್ಣಗೊಳಿಸಲಾಗುತ್ತದೆ. ಈ ಮೂಲಕ ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜನತೆಗೆ ಕುಡಿಯುವ ನೀರಿಗೆ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...