ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಡಿ.18 : ಬೆಳೆ ಪರಿಹಾರವನ್ನು ನೀಡುವಲ್ಲಿ ವಿಳಂಬ, ಮಧ್ಯಂತರ ಪರಿಹಾರ ಮತ್ತು ಬೆಳೆವಿಮೆ ನೀಡುವಲ್ಲಿ ವಿಳಂಬ ಹಾಗೂ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕುಗಳ ರೈತರ ಸಾಲಗಳ ಮನ್ನಾ ಹಾಗೂ ಗೋಶಾಲೆ ತೆರೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಇಂದು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಬಟನೆಯನ್ನು ನಡೆಸಲಾಯಿತು.
ಕರ್ನಾಟಕ ರಾಜ್ಯಾದಲ್ಲಿ ಬರಗಾಲ ಮುಂಗಾರು-ಹಿಂಗಾರಿನಲ್ಲಿ ಆವರಿಸಿದ್ದು, ಸರ್ಕಾರವು ಇದುವರೆಗೂ ರೈತರಿಗೆ ಯಾವುದೇ ಪರಿಹಾರ ಹಣವನ್ನು ನೀಡುವ ಬಗ್ಗೆ ಭರವಸೆ ಇಲ್ಲ. ರೂ.2000/- ಗಳನ್ನು ರೈತರ ಖಾತೆಗೆ ಜಮಾ ಮಾಡುವಂತೆವೆಂದು ಹೇಳುತ್ತಿದೆ. ಇದು ರೈತರಿಗೆ ಯಾವುದಾರಲ್ಲೂ ಸರ್ಕಾರದ ಮೇಲೆ ಭರವಸೆಯಿಲ್ಲ, ಎನ್.ಡಿ.ಆರ್.ಎಫ್ ಪ್ರಕಾರ ರೈತರಿಗೆ ಪರಿಹಾರದ ಮೊತ್ತವನ್ನು ಹಾಗೂ ಪಕ್ಕದ ಆಂದ್ರಪ್ರದೇಶ ಸರ್ಕಾರವು ರೈತರಿಗೆ ಹೆಕ್ಟರ್ಗೆ ರೂ.25000/- ಗಳಂತೆ ಪರಿಹಾರ ನೀಡುತ್ತಿದೆ. ಅದೇ ರೀತಿಯಾಗಿ ನಮ್ಮ ರಾಜ್ಯ ಸರ್ಕಾರವು ರೈತರಿಗೆ ಹೆಕ್ಟರ್ಗೆ ರೂ.25,000/-ಗಳಂತೆ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ರೈತರ ಮುಂಗಾರು ಬೆಳೆ ಮಳೆ ಇಲ್ಲದೆ ಸಂಪೂರ್ಣ ನಾಶವಾಗಿದ್ದು, ಸರ್ಕಾರವು ಬರಗಾಲವೆಂದು ಘೋಷಣೆ ಮಾಡಿದ್ದು, ಇದುವರೆಗೂ ಬೆಳೆವಿಮೆಯು ರೈತರ ಖಾತೆಗಳಿಗೆ ಸಂದಾಯವಾಗಿರುವುದಿಲ್ಲ. ಕೂಡಲೇ ಬೆಳೆವಿಮೆಯನ್ನು ರೈತರ ಖಾತೆಗೆ ಜಮಾ ಮಾಡಬೇಕು, ರಾಜ್ಯದಲ್ಲಿ ಬರಗಾಲವಿದ್ದು, ರಾಜ್ಯದಲ್ಲಿ ಎಲ್ಲಿಯೂ ಸಹ ಗೋಶಾಲೆಯನ್ನು ತೆರೆದಿರುವುದಿಲ್ಲ. ದನ-ಕರುಗಳಿಗೆ ಮೇವಿನ ಕೊರತೆಯಿದ್ದು, ಕೂಡಲೇ ಪಂಚಾಯಿತಿಗೊಂದು ಗೋಶಾಲೆ ತೆರೆಯಬೇಕು, ಬೆಳಗಾವಿ ಅಧಿವೇಶನದಲ್ಲಿ ರಾಜ್ಯಸರ್ಕಾರವು ಸಹಕಾರ ಬ್ಯಾಂಕುಗಳಲ್ಲಿ ರೈತರು ಅಸಲು ಜಮಾ ಮಾಡಿದರೆ, ಬಡ್ಡಿ ಮನ್ನಾ ಮಾಡುತ್ತೇವೆಂದು ಹೇಳಿರುವುದು ಖಂಡನೀಯ. ರಾಜ್ಯದಲ್ಲಿ ಬೀಕರ ಬರಗಾಲವಿದ್ದು, ರೈತರು ಜೀವನ ನಡೆಸುವುದೆ ಕಷ್ಟಕರವಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಸಹಕಾರ ಬ್ಯಾಂಕ್ ಹಾಗೂ ರಾಷ್ಟ್ರೀಕೃತ ಎಲ್ಲಾ ಬ್ಯಾಂಕುಗಳ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಸುರೇಶ್ ಬಾಬು, ತಾಲ್ಲೂಕು ಅಧ್ಯಕ್ಷ ಧನಂಜಯ, ಮುಖಂಡರಾದ ಬೇಡರೆಡ್ಡಿ ಹಳ್ಳಿ ಬಸವರೆಡ್ಡಿ, ಭೂತಯ್ಯ, ತಿಪ್ಪೇಸ್ವಾಮಿ ಕರಿಯಣ್ಣ, ನಾಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್