Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಮಾಜಿ ಸಚಿವ ಹಾಗೂ ಮಾದಿಗ ಸಮುದಾಯದ ಮುಖಂಡರ ನಡುವೆ ವಾಗ್ವಾದ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.18 :
ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಯುತ್ತಿದ್ದ ವೇಳೆ ಮಾದಿಗ ಸಮಾಜದ ಮುಖಂಡರು ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಸರ್ಕಾರದ ವೈಫಲ್ಯದ ಕುರಿತು ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಒಳ ನುಗ್ಗಿದ ಭ್ರಷ್ಠಾಚಾರ ನಿರ್ಮೂಲನ ಸಮಿತಿ ಹಾಗೂ ಮಾದಿಗ ಹೋರಾಟ ಸಮಿತಿ ಮುಖಂಡರು ಗೋವಿಂದ ಕಾರಜೋಳ  ಅವರನ್ನು ತರಾಟೆಗೆ ತೆಗೆದುಕೊಂಡಿದ್ದು ದಲಿತರಿಗೆ ಬಿಜೆಪಿ ಹಾಗೂ ಮಾಜಿ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅವರಿಂದ ಅನ್ಯಾಯವಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ ಪತ್ರಿಕಾ ಗೋಷ್ಠಿ ಮಧ್ಯೆಯೇ ಮಾಜಿ ಸಚಿವ ಗೋವಿಂದ ಕಾರಜೋಳ ಮತ್ತು ಮುಖಂಡರ ನಡುವೆ ವಾಗ್ವಾದ ಸಹ ನಡೆದಿದ್ದು ಮೊದಲು ಹೊರಗೆ ಹೋಗುವಂತೆ ಗೋವಿಂದ ಕಾರಜೋಳ ಬೈದು ರೇಗಾಡಿದ್ದು ನಿಮಗೆ ಅನ್ಯಾಯವಾಗಿದ್ದರೆ ಆಮೇಲೆ ಬಂದು ಕೇಳಿ ಎಂದು ಹೇಳಿದ ಬೈದು ಕಳುಹಿಸಿದ್ದಾರೆ.

ಅಷ್ಟೇ ಅಲ್ಲದೆ ಗೂಂಡಾಗಿರಿ ಮಾಡುತ್ತಿದ್ದೀರಾ ಎಂದು ಕೂಗಾಡಿದ ಗೋವಿಂದ ಕಾರಜೋಳ ಅವರು ಇಂದೊಂದು ಗೂಂಡಾ ರಾಜ್ಯವಾಗಿದ್ದು ಸಿದ್ದರಾಮಯ್ಯ ಅವರು ಕೂಡಲೇ ಗಲಾಟೆ ಮಾಡಿದವರನ್ನು ಸಂಜೆಯೊಳಗೆ ಬಂಧಿಸಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದು ಈ ಬಗ್ಗೆ ಡಿಜಿಪಿಗೂ ಸಹ ಸ್ಥಳದಲ್ಲೆ ಕರೆ ಮಾಡಿದ ಗೋವಿಂದ ಕಾರಜೋಳ ಅವರು ನಿಮ್ಮ ಎಸ್ಪಿ ಅವರು ಕರೆ ಸ್ಬೀಕರಿಸುತ್ತಿಲ್ಲ ಪತ್ರಿಕಾಗೋಷ್ಠಿ ವೇಳೆ ಗೂಂಡಾಗಳು ದಾಂದಲೆ ಮಾಡಿದ್ದಾರೆ ಹಾಗಾಗಿ ಈ ಕೂಡಲೇ ದಾಂದಲೆ ಮಾಡಿದವರನ್ನ ಬಂದಿಸಬೇಕು ಇಲ್ಲದಿದ್ದಲ್ಲಿ ಡಿಸಿ ಕಚೇರಿ ಬಳಿ ನಾನು ಧರಣಿ ಕೂರುತ್ತೇನೆ ಎಂದು ಡಿಜಿಪಿಗೆ  ಗೋವಿಂದ ಕಾರಜೋಳ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!