Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡಕ್ಕೆ ತನ್ನದೇ‌‌ ಆದ ಅಂತರ್ಗತ ಶಕ್ತಿ ಇದೆ: ಸಿಎಂ

Facebook
Twitter
Telegram
WhatsApp

ಬೆಂಗಳೂರು: ಕನ್ನಡಕ್ಕೆ ತನ್ನದೇ‌‌ ಆದ ಅಂತರ್ಗತ ಶಕ್ತಿ ಇದೆ,ಅದನ್ನು ಕಡಿಮೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು 66 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಲವು ರಾಜರು ನಮ್ಮನ್ನು ಆಳಿದರೂ ಕನ್ನಡ ತನ್ನ ಅಸ್ತಿತ್ವ ಕಾಪಾಡಿಕೊಂಡು ಗಟ್ಟಿಯಾಗಿ ನಿಂತಿದೆ. ಹಲವು ದಾಳಿಗಳನ್ನು ಕನ್ನಡ ಎದುರಿಸಿ ನಿಂತಿದೆ. ಕನ್ನಡಕ್ಕೆ ತನ್ನದೇ ಆದ ಅಂತರ್ಗತ ಶಕ್ತಿ ಇದೆ.‌ ಇದನ್ನು ಕಡಿಮೆ ಮಾಡಲು ಯಾವ ಶಕ್ತಿಗೂ ಸಾಧ್ಯವಿಲ್ಲ ಎಂದರು.

ಕೋವಿಡ್ ಹಿನ್ನೆಲೆಯಲ್ಲಿ ಕನ್ನಡದ ರಾಜ್ಯೋತ್ಸವವನ್ನು ಸೀಮಿತವಾಗಿ ಆಚರಣೆ ಮಾಡಬೇಕಾಗಿ ಬಂದಿದೆ ಎಂದ ಅವರು, ಕನ್ನಡ ನಮ್ಮೆಲ್ಲರನ್ನು ಒಗ್ಗೂಡಿಸಿದೆ. ಅದು ಬೇರು ಇದ್ದಂತೆ. ಈ ತಾಯಿ ಬೇರನ್ನು ಸಂರಕ್ಷಣೆ ಮಾಡಿ ಅದರ ಮೂಲಕ ಪ್ರಪಂಚದಲ್ಲಿ ಅತೀ ದೊಡ್ಡ ಮರವನ್ನಾಗಿ ಮಾಡಬೇಕಿದೆ ಎಂದರು.

ಮನಕುಲಕ್ಕೆ ಕನ್ನಡದ ಮಹತ್ವ ಪ್ರಯೋಜನ ಹಾಗೂ ಸ್ವಾಭಿಮಾನ ತಿಳಿಸುವ ಶತಮಾನ 21 ನೇ ಶತಮಾನಾಗಿದೆ ಎಂದು ಹೇಳಿದರು.
ಕನ್ನಡಕ್ಕೆ ದೊಡ್ಡ ಇತಿಹಾಸ ಇದೆ. ಭಾಷೆ ಬದುಕನ್ನು ರೂಪಿಸುವ ಅಸ್ತ್ರವಾಗಿದೆ. ಭಾಷೆ ಗಟ್ಟಿ ಆದಷ್ಟು ನಾಡು ಶಕ್ತಿಶಾಲಿ‌ ಆಗಿರುತ್ತದೆ. ಕನ್ನಡವನ್ನು ಎಲ್ಲಾ ಆಯಾಮಗಳಲ್ಲಿ ವಿಸ್ತರಣೆ ಮಾಡಬೇಕಿದೆ. ಕನ್ನಡವನ್ನು ಗಡಿಗಳಿಗೆ ಸೀಮಿತಗೊಳಿಸಿ ನೋಡಬಾರದು. ಹೈದರಾಬಾದ್ ಕರ್ನಾಟಕ ಕಲ್ಯಾಣ ಕರ್ನಾಟಕ ಎಂದು ಹೆಸರಿಡಲಾಯಿತು, ಮುಂದಿನ ಸಚಿವ ಸಂಪುಟದಲ್ಲಿ ಮುಂಬಯಿ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಬಳಕೆ ಮಾಡಲು ನಿರ್ಣಯ ಕೈಗೊಳ್ಳಲಾಗುವುದು ಎಂದು‌ ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

error: Content is protected !!