Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಮಹತ್ವದ ಆದೇಶ

---Advertisement---

ಬೆಂಗಳೂರು: ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲಂಚದ ಆರೋಪದ ಮೇಲೆ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ದೂರನ್ನು ರದ್ದುಗೊಳಿಸಿ, ಹೈಕೋರ್ಟ್ ಆದೇಶ ಹೊರಡಿಸಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಾಳು ವಿರೂಪಾಕ್ಷಪ್ಪ KSDL ಅಧ್ಯಕ್ಷ ಹುದ್ದೆಯಲ್ಲಿ ಇದ್ದರು. ಈ ವೇಳೆ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ನಲ್ಲಿ ಭಾರೀ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಸ್ಪೀಕರ್ ಅವರ ಅನುಮತಿ ಪಡೆಯದೆನೆ ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಹೀಗಾಗಿ ತಾಂತ್ರಿಕ ಕಾರಣದಿಂದಾಗಿ ಏಕಸದಸ್ಯ ಪೀಠ, ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಇದ್ದ ಕೇಸನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

ಇದೇ ಪ್ರಕರಣದಲ್ಲಿ ಮಾಡಾಳು ಪುತ್ರನಿಗೂ ಸಂಕಷ್ಟ ಎದುರಾಗಿತ್ತು. ಇದೇ ಕೇಸಲ್ಲಿ ಮಾಡಾಳು ವಿರೂಪಾಕ್ಷಪ್ಪ ಜೈಲು ಕೂಡ ಸೇರಿದ್ದರು. ಆದರೆ ಹೈಕೋರ್ಟ್ ಮಾಡಾಳು ವಿರೂಪಾಕ್ಷಪ್ಪ ಅವರ ಕೇಸನ್ನು ಮಾತ್ರ ರದ್ದು ಮಾಡಿದೆ. ಉಳಿದಂತೆ ಅವರ ಪುತ್ರನ ಕೇಸ್ ಹಾಗೆಯೇ ಇದೆ. ವಿರೂಪಾಕ್ಷಪ್ಪ ಪುತ್ರ ಸೇರಿದಂತೆ ಹಲವು ಆರೋಪಿಗಳ ಮೇಲಿನ ಪ್ರಕರಣ ಹಾಗೆಯೇ ಇದೆ.

ಇನ್ನು ವಿರೂಪಾಕ್ಷಪ್ಪ ಅವರು ಅರೆಸ್ಟ್ ಆದ ಮೇಲೆ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿತ್ತು. ಸಿಕ್ಕ ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆಯೂ ಜೈಲಿಂದ ಬಂದ ಬಳಿಕ ವಿರೂಪಾಕ್ಷಪ್ಪ ಅವರು ಹೇಳಿದ್ದರು. ನಮ್ಮ ತಾಲೂಕನ್ನು ಅಡಿಕೆ ನಾಡು ಚನ್ನಗಿರಿ ಅಂತ ಹೇಳುತ್ತಾರೆ. ಅಡಿಕೆ ನಾಡಿನಲ್ಲಿ ಸಾಮಾನ್ಯ ತೋಟದ ಮಾಲೀಕರನ ಮನೆಯಲ್ಲಿ ಕಡಿಮೆ ಎಂದರೂ ಎರಡರಿಂದ ಮೂರು ಕೋಟಿ ರೂಪಾಯಿ ಹಣ ಇರುತ್ತೆ. ನಮ್ಮ ಮನೆಯಲ್ಲಿ 125 ಎಕರೆ ಅಡಿಕೆ ತೋಟ ಇದೆ, 2 ಕ್ರಷರ್​​ಗಳಿದೆ. ಇದರೊಂದಿಗೆ ಎರಡು ಅಡಕೆ ಮಂಡಿಯನ್ನು ಹೊಂದಿದ್ದೇವೆ. ಬೇರೆ ಬೇರೆ ವ್ಯವಹಾರಗಳನ್ನು ಮಾಡುತ್ತಿದ್ದೇವೆ. ಈಗ ಸಿಕ್ಕಿರುವ ಹಣಕ್ಕೆ ಸೂಕ್ತ ದಾಖಲೆ ಕೊಟ್ಟು ಹಣ ವಾಪಸ್ ಪಡೆದುಕೊಳ್ಳುತ್ತೇನೆ ಎಂದಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment