Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಮಹತ್ವದ ಆದೇಶ

Facebook
Twitter
Telegram
WhatsApp

ಬೆಂಗಳೂರು: ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲಂಚದ ಆರೋಪದ ಮೇಲೆ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ದೂರನ್ನು ರದ್ದುಗೊಳಿಸಿ, ಹೈಕೋರ್ಟ್ ಆದೇಶ ಹೊರಡಿಸಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಾಳು ವಿರೂಪಾಕ್ಷಪ್ಪ KSDL ಅಧ್ಯಕ್ಷ ಹುದ್ದೆಯಲ್ಲಿ ಇದ್ದರು. ಈ ವೇಳೆ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ನಲ್ಲಿ ಭಾರೀ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಸ್ಪೀಕರ್ ಅವರ ಅನುಮತಿ ಪಡೆಯದೆನೆ ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಹೀಗಾಗಿ ತಾಂತ್ರಿಕ ಕಾರಣದಿಂದಾಗಿ ಏಕಸದಸ್ಯ ಪೀಠ, ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಇದ್ದ ಕೇಸನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

ಇದೇ ಪ್ರಕರಣದಲ್ಲಿ ಮಾಡಾಳು ಪುತ್ರನಿಗೂ ಸಂಕಷ್ಟ ಎದುರಾಗಿತ್ತು. ಇದೇ ಕೇಸಲ್ಲಿ ಮಾಡಾಳು ವಿರೂಪಾಕ್ಷಪ್ಪ ಜೈಲು ಕೂಡ ಸೇರಿದ್ದರು. ಆದರೆ ಹೈಕೋರ್ಟ್ ಮಾಡಾಳು ವಿರೂಪಾಕ್ಷಪ್ಪ ಅವರ ಕೇಸನ್ನು ಮಾತ್ರ ರದ್ದು ಮಾಡಿದೆ. ಉಳಿದಂತೆ ಅವರ ಪುತ್ರನ ಕೇಸ್ ಹಾಗೆಯೇ ಇದೆ. ವಿರೂಪಾಕ್ಷಪ್ಪ ಪುತ್ರ ಸೇರಿದಂತೆ ಹಲವು ಆರೋಪಿಗಳ ಮೇಲಿನ ಪ್ರಕರಣ ಹಾಗೆಯೇ ಇದೆ.

ಇನ್ನು ವಿರೂಪಾಕ್ಷಪ್ಪ ಅವರು ಅರೆಸ್ಟ್ ಆದ ಮೇಲೆ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿತ್ತು. ಸಿಕ್ಕ ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆಯೂ ಜೈಲಿಂದ ಬಂದ ಬಳಿಕ ವಿರೂಪಾಕ್ಷಪ್ಪ ಅವರು ಹೇಳಿದ್ದರು. ನಮ್ಮ ತಾಲೂಕನ್ನು ಅಡಿಕೆ ನಾಡು ಚನ್ನಗಿರಿ ಅಂತ ಹೇಳುತ್ತಾರೆ. ಅಡಿಕೆ ನಾಡಿನಲ್ಲಿ ಸಾಮಾನ್ಯ ತೋಟದ ಮಾಲೀಕರನ ಮನೆಯಲ್ಲಿ ಕಡಿಮೆ ಎಂದರೂ ಎರಡರಿಂದ ಮೂರು ಕೋಟಿ ರೂಪಾಯಿ ಹಣ ಇರುತ್ತೆ. ನಮ್ಮ ಮನೆಯಲ್ಲಿ 125 ಎಕರೆ ಅಡಿಕೆ ತೋಟ ಇದೆ, 2 ಕ್ರಷರ್​​ಗಳಿದೆ. ಇದರೊಂದಿಗೆ ಎರಡು ಅಡಕೆ ಮಂಡಿಯನ್ನು ಹೊಂದಿದ್ದೇವೆ. ಬೇರೆ ಬೇರೆ ವ್ಯವಹಾರಗಳನ್ನು ಮಾಡುತ್ತಿದ್ದೇವೆ. ಈಗ ಸಿಕ್ಕಿರುವ ಹಣಕ್ಕೆ ಸೂಕ್ತ ದಾಖಲೆ ಕೊಟ್ಟು ಹಣ ವಾಪಸ್ ಪಡೆದುಕೊಳ್ಳುತ್ತೇನೆ ಎಂದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!